ಹಾವೇರಿ:ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ದೇವಗಿರಿ-ಸವಣೂರು ರಸ್ತೆಯಲ್ಲಿನ ಮೆಳ್ಳಾಗಟ್ಟಿ ಪ್ಲಾಟ್ ಬಳಿ ಮಂಗಳವಾರ ನಡೆದಿದೆ.
ಈ ಅಪಘಾತದಲ್ಲಿ ಜಯ ಕರ್ನಾಟಕ ಸಂಘಟನೆಯ ರಮೇಶ ಆನವಟ್ಟಿಯವರ ಪುತ್ರ ಆದರ್ಶ ಹಾಗೂ ಅವರ ಸಹೋದರನ ಪುತ್ರ ಗಣೇಶ ಆನವಟ್ಟಿಯವರಿಗೆ ತೀವ್ರ ಗಾಯಗಳಾಗಿವೆ.ಗಾಯಾಳುಗಳನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಆದರ್ಶನಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯ ಇದ್ದ ಕಾರಣಕ್ಕೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.