ADVERTISEMENT

ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರು ರಕ್ಷಣೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 7:53 IST
Last Updated 14 ಆಗಸ್ಟ್ 2021, 7:53 IST
ಕಂಟೇನರ್ ಲಾರಿಯಲ್ಲಿ ತುಂಬಿ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಲಾಗಿದೆ
ಕಂಟೇನರ್ ಲಾರಿಯಲ್ಲಿ ತುಂಬಿ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಲಾಗಿದೆ   

ಗುತ್ತಲ (ಹಾವೇರಿ ಜಿಲ್ಲೆ): ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು.

ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್‌ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.

ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್‌ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.

ADVERTISEMENT

ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.