ADVERTISEMENT

‘ಯುವ ಸಮೂಹಕ್ಕೆ ಸ್ಪೂರ್ತಿ ಮಹಾದೇವಪ್ಪ’

ಮೈಲಾರ ಮಹಾದೇವಪ್ಪನವರ 113ನೇ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 15:07 IST
Last Updated 8 ಜೂನ್ 2024, 15:07 IST
ಹಾವೇರಿ ನಗರದ ಹೊರವಲಯದಲ್ಲಿನ ವೀರಸೌಧದಲ್ಲಿ ಹುತಾತ್ಮ ಮೈಲಾರ ಮಹಾದೇವಪ್ಪನವರ ಸಮಾಧಿಗೆ ಪೂಜೆ ಸಲ್ಲಿಸಲಾಯಿತು ಪ್ರಜಾವಾಣಿ ಚಿತ್ರ
ಹಾವೇರಿ ನಗರದ ಹೊರವಲಯದಲ್ಲಿನ ವೀರಸೌಧದಲ್ಲಿ ಹುತಾತ್ಮ ಮೈಲಾರ ಮಹಾದೇವಪ್ಪನವರ ಸಮಾಧಿಗೆ ಪೂಜೆ ಸಲ್ಲಿಸಲಾಯಿತು ಪ್ರಜಾವಾಣಿ ಚಿತ್ರ   

ಹಾವೇರಿ: ‘ತ್ಯಾಗ ಮತ್ತು ಬಲಿದಾನದ ಮೂಲಕ ಬದುಕಿನುದ್ದಕ್ಕೂ ದೇಶಪ್ರೇಮವನ್ನು ರೂಢಿಸಿಕೊಂಡು ಹುತಾತ್ಮರಾದ ಮೈಲಾರ ಮಹಾದೇವಪ್ಪನವರು ಯುವ ಸಮೂಹಕ್ಕೆ ಸದಾ ಪ್ರೇರಣಾದಾಯಕ ಶಕ್ತಿ’ ಎಂದು ಹುತಾತ್ಮ ಮೈಲಾರ ಮಹಾದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟಿ ವಿ.ಎನ್.ತಿಪ್ಪನಗೌಡ್ರ ಅಭಿಪ್ರಾಯ ಪಟ್ಟರು.

ನಗರದ ವೀರಸೌಧದಲ್ಲಿ ಮೈಲಾರ ಮಹಾದೇವಪ್ಪನವರ 113ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳಿಗೆ ಮಾರು ಹೋಗಿದ್ದ ಮೈಲಾರ ಮಹಾದೇವಪ್ಪನವರು ದೇಶ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದರು.  ತಾಯ್ನಾಡಿಗೆ ಹೋರಾಡುತ್ತಿದ್ದ ಸಂದರ್ಭದಲ್ಲಿ ಬ್ರಿಟಿಷರ ಗುಂಡಿಗೆ ಎದೆಯೊಡ್ಡಿ ದೇಶದ ಸ್ವಾತಂತ್ರ್ಯದ ಕನಸು ಕಂಡಿದ್ದರು.ಅಂಥ ಧೀಮಂತ ಹೋರಾಟಗಾರ ಬದುಕಿದ 32 ವರ್ಷದಲ್ಲಿ ನಾಡಿನ ಗಮನ ಸೆಳೆದಿದ್ದರು’ ಎಂದರು.

ಗ್ರಾಮ ಸ್ವರಾಜ್ ಅಭಿಯಾನದ ರಾಜ್ಯ ಸಂಚಾಲಕ ಆವರಗೆರೆ ರುದ್ರಮುನಿ ಮಾತನಾಡಿ, ‘ದೇಶದ ಸ್ವಾತಂತ್ರ್ಯಕ್ಕೆ ತಮ್ಮ ಜೀವ ಮತ್ತು ಜೀವನವನ್ನು ಮುಡಿಪಿಟ್ಟ ಹುತಾತ್ಮ ಮೈಲಾರ ಮಹಾದೇವಪ್ಪನವರ ತ್ಯಾಗ ಮತ್ತು ಬಲಿದಾನವನ್ನು ನವಪೀಳಿಗೆಗೆ ಮನವರಿಕೆ ಮಾಡಿಕೊಡಬೇಕಿದೆ’ ಎಂದರು.

ADVERTISEMENT

ಇದೇ ಸಂದರ್ಭದಲ್ಲಿ ವೀರಸೌಧದಲ್ಲಿನ ಮೈಲಾರ ಮಹಾದೇವಪ್ಪನವರ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ನಗರದಲ್ಲಿನ ಮೈಲಾರ ಮಹಾದೇವಪ್ಪನವರ ಪುತ್ಥಳಿಗೆ ಹೂಮಾಲೆ ಅರ್ಪಿಸಿ,ಗೌರವ ಸಲ್ಲಿಸಲಾಯಿತು.

ಗೂಳಪ್ಪ ಅರಳಿಕಟ್ಟಿ, ಮೈಲಾರ ಮಹಾದೇವಪ್ಪನವರ ಅಭಿಮಾನಿಗಳಾದ ಹೇಮಣ್ಣ ಗಾಣಿಗೇರ, ಬಸವರಾಜ ಗಾಣಿಗೇರ, ಪರಮೇಶಪ್ಪ ಮೈಲಾರ,ಮಹಾದೇವಪ್ಪ ಮೈಲಾರ, ಸುಭಾಷ್ ಮಡಿವಾಳರ, ಷಣ್ಮುಖಯ್ಯ ಕಿತ್ತೂರುಮಠ,ಮಂಜಯ್ಯ ಅಡವಿಮಠ, ಮಂಜನಗೌಡ ಹೊಸಗೌಡ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಮಾರುತಿ ಹೊಂಬರಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.