ADVERTISEMENT

ಹಾವೇರಿ: ನೆರೆ ವೀಕ್ಷಣೆಗೆ ಐಎಂಸಿ ಕೇಂದ್ರ ತಂಡ ಭೇಟಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2021, 6:20 IST
Last Updated 18 ಡಿಸೆಂಬರ್ 2021, 6:20 IST
ಶಿಗ್ಗಾವಿ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ತಂಡ ನೆರೆ ಹಾನಿಯ ಬಗ್ಗೆ ಪರಿಶೀಲನೆ ನಡೆಸಿತು.
ಶಿಗ್ಗಾವಿ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ತಂಡ ನೆರೆ ಹಾನಿಯ ಬಗ್ಗೆ ಪರಿಶೀಲನೆ ನಡೆಸಿತು.   

ಹಾವೇರಿ: ಐಎಂಸಿ ಕೇಂದ್ರ ತಂಡವು ಜಿಲ್ಲೆಯಲ್ಲಿ ಶನಿವಾರ ಪ್ರವಾಸ ಕೈಗೊಂಡು 2021-22ನೇ ಸಾಲಿನ ನವೆಂಬರ್‌ ತಿಂಗಳಲ್ಲಿ ಸತತ ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕೇಂದ್ರ ತಂಡವು ಬೆಳಿಗ್ಗೆ 9.40ರಿಂದ ಶಿಗ್ಗಾವಿ ತಾಲ್ಲೂಕಿನ ಕುನ್ನೂರು, ದುಂಡಸಿ, ಅರಟಾಳ, ಹೊಸೂರು ಗ್ರಾಮಗಳ ಪ್ರದೇಶಕ್ಕೆ ಭೇಟಿ ನೀಡಿ, ನೆರೆ ಸಂತ್ರಸ್ತರ ಅಹವಾಲು ಆಲಿಸಿತು.

ನಂತರ ಬೆಳಿಗ್ಗೆ 10.30ಕ್ಕೆ ಶಿಗ್ಗಾವಿಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಪವರ್‌ ಪಾಯಿಂಟ್ ಪ್ರಸೆಂಟೇಶನ್‌ ವೀಕ್ಷಣೆ ಮಾಡಿತು.

ADVERTISEMENT

ಮಧ್ಯಾಹ್ನ 12.30ಕ್ಕೆ ಸವಣೂರು ತಾಲ್ಲೂಕಿನ ಹೊಸಮನ್ನಂಗಿ, ಹಳೇಮನ್ನಂಗಿ ಪ್ರದೇಶಗಳಿಗೆ ಭೇಟಿ ನೀಡಲಿದೆ.

ಮಧ್ಯಾಹ್ನ 1.45ಕ್ಕೆ ಹಾವೇರಿಗೆ ಆಗಮಿಸುವರು. ಮಧ್ಯಾಹ್ನ 3.45ಕ್ಕೆ ಹಿರೇಕೆರೂರು ತಾಲ್ಲೂಕಿನ ಚನ್ನಹಳ್ಳಿ, ದಂಡಿಗಿಹಳ್ಳಿ ಹಾಗೂ ರಾಣೆಬೆನ್ನೂರು ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.