ADVERTISEMENT

ಬಾಲಕಾರ್ಮಿಕ ಪದ್ಧತಿ: ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 12 ಜೂನ್ 2023, 16:43 IST
Last Updated 12 ಜೂನ್ 2023, 16:43 IST
ಹಾವೇರಿ ನಗರದ ಜೆ.ಪಿ ರೋಟರಿ ಶಾಲೆಯಲ್ಲಿ ಸೋಮವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಪುಟ್ಟರಾಜು ಉದ್ಘಾಟಿಸಿದರು
ಹಾವೇರಿ ನಗರದ ಜೆ.ಪಿ ರೋಟರಿ ಶಾಲೆಯಲ್ಲಿ ಸೋಮವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಪುಟ್ಟರಾಜು ಉದ್ಘಾಟಿಸಿದರು   

ಹಾವೇರಿ: ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಸೋಮವಾರ ಚಾಲನೆ ನೀಡಿದರು.

ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಂತರ ನಗರದ ಜೆ.ಪಿ ರೋಟರಿ ಶಾಲೆಯಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಪುಟ್ಟರಾಜು ಅವರು ಉದ್ಘಾಟಿಸಿ ಮಾತನಾಡಿದರು.

ಸಹಾಯಕ ಕಾನೂನು ನೆರವು ಅಭೀರಕ್ಷಕ ಎನ್.ಎನ್.ದಿಳ್ಳೆಪ್ಪನವರ, ಪೊಲೀಸ್ ಇಲಾಖೆಯ ಎಂ.ಆರ್. ಜಾಲಗಾರ ಬಾಲಕಾರ್ಮಿಕ ಪದ್ದತಿ ನಿಷೇಧ ಮತ್ತು ನಿಯಂತ್ರಣದ ಬಗ್ಗೆ ಹಾಗೂ ಬಾಲಕಾರ್ಮಿಕ ಕಾರ್ಯವಿಧಾನದ ಬಗ್ಗೆ ಉಪನ್ಯಾಸ ನೀಡಿದರು.

ADVERTISEMENT

ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಲಕ್ಷ್ಮಣ ಕುಳಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಾವೇರಿ ಶಹರ ಪೊಲೀಸ್ ಠಾಣೆ ಸಿಪಿಐ ಸುರೇಶ ಸಗರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್‌, ಜಿಲ್ಲಾ ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ಮಾರುತಿ ಎನ್.ಕೆ, ಶಾಲಾ ಮುಖ್ಯೋಪಾಧ್ಯಾಯ ಸಿ.ಎ.ದಳವಾಯಿ, ದೈಹಿಕ ಶಿಕ್ಷಣ ಶಿಕ್ಷಕ ಆರ್.ಜಿ.ಮೇಟಿ ಇದ್ದರು. ಕು.ದೀಪಾ ಕುಲಕರ್ಣಿ ನಿರೂಪಿಸಿದರು. ರಾಘವೇಂದ್ರ ಶಿರೂರ ಸ್ವಾಗತಿಸಿದರು.

ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಡಿವೈಎಸ್ಪಿ ಶಿವಾನಂದ ಚಲವಾದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.