ಹಿರೇಕೆರೂರ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯವನ್ನು 524 ಅಡಿಗೆ ಏರಿಕೆ ಮಾಡಲು ತಜ್ಞರ ತಂಡದ ಜತೆ ದೆಹಲಿಯಲ್ಲಿ ಚರ್ಚಿಸುತ್ತೇನೆ. ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಆದಷ್ಟು ಬೇಗ ನೋಟಿಫಿಕೇಷನ್ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಏರಿಕೆ ಸಂಬಂಧ ತಜ್ಞರ ವರದಿ ಬಂದಿದ್ದು, ಆರೋಗ್ಯ ಇಲಾಖೆಯ ವೈಫಲ್ಯ ಸಾಬೀತಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು, ಇದು ಹಾವೇರಿ ಜಿಲ್ಲೆಗೆ ಮಾತ್ರ ಸಂಬಂಧಿಸಿದ್ದಲ್ಲ. ಇಡೀ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಬಂದಾಗ ಹಲವಾರು ಸಮಸ್ಯೆಗಳು ಉಂಟಾಗಿವೆ.
ತಜ್ಞರು ಕೆಲವು ಸಲಹೆ, ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯನ್ನು ಉನ್ನತೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.