ADVERTISEMENT

ಕಳಂಕರಹಿತ ರಾಜಕಾರಣಿ ಸುರೇಶ ಅಂಗಡಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 14:31 IST
Last Updated 24 ಸೆಪ್ಟೆಂಬರ್ 2020, 14:31 IST
ಹಾವೇರಿಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಸಂಸದ ಸುರೇಶ ಅಂಗಡಿ ಅವರ ಶ್ರದ್ಧಾಂಜಲಿ ಸಭೆ ನಡೆಯಿತು
ಹಾವೇರಿಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಸಂಸದ ಸುರೇಶ ಅಂಗಡಿ ಅವರ ಶ್ರದ್ಧಾಂಜಲಿ ಸಭೆ ನಡೆಯಿತು   

ಹಾವೇರಿ:ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರಿಗೆ ಮೌನಾಚರಣೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ‘ರಾಜಕೀಯದಲ್ಲಿ ವಿವಾದಗಳು, ಆರೋಪ–ಪ್ರತ್ಯಾರೋಪಗಳು ಸಾಮಾನ್ಯ. ಆದರೆ, ಸುರೇಶ ಅಂಗಡಿಯವರು ಒಂದೇ ಒಂದು ಕಳಂಕವನ್ನು ತಮ್ಮ ರಾಜಕೀಯ ಬದುಕಿಗೆ ಅಂಟಿಸಿಕೊಂಡವರಲ್ಲ. ಸಜ್ಜನ ರಾಜಕಾರಣಿಯಾಗಿದ್ದ ಅವರು ಅಜಾತ ಶತ್ರು ಎನಿಸಿದ್ದರು’ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಗಿರೀಶ ತುಪ್ಪದ, ಪ್ರಭು ಹಿಟ್ನಳ್ಳಿ, ರಮೇಶ ಪಾಲನಕರ, ಚಂದ್ರಹಾಸ ಕ್ಯಾತಣ್ಣವನರ, ನಾಗರಾಜ ಹುರಳಿಕೊಪ್ಪಿ, ಮಂಜುನಾಥ ಮಡಿವಾಳರ, ಜಗದೀಶ ಮಲಗೋಡ, ಶಿವರಾಜ ಮತ್ತಿಹಳ್ಳಿ, ಮಂಜುನಾಥ ತಾಂಡೂರ, ನಾಗರಾಜ ಹಿರೇಮಠ, ಲಲಿತಾ ಗುಂಡೇನಹಳ್ಳಿ ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.