ADVERTISEMENT

ಹಾವೇರಿ | ‘ಆಹಾರ ಕಿಟ್‌ ಉಳ್ಳವರ ಪಾಲು’

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 16:23 IST
Last Updated 1 ಜೂನ್ 2020, 16:23 IST
ಕಾರ್ಮಿಕ ಇಲಾಖೆಯಿಂದ ವಿತರಿಸುತ್ತಿರುವ ಆಹಾರ‌ ಕಿಟ್‌ಗಳು ದುರುಪಯೋಗವಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆಯ ಕಾಂಗ್ರೆಸ್‌ ಸದಸ್ಯರು ಕಾರ್ಮಿಕ ಇಲಾಖೆಗೆ ಸಿಬ್ಬಂದಿಗೆ ಸೋಮವಾರ ಮನವಿ ಸಲ್ಲಿಸಿದರು 
ಕಾರ್ಮಿಕ ಇಲಾಖೆಯಿಂದ ವಿತರಿಸುತ್ತಿರುವ ಆಹಾರ‌ ಕಿಟ್‌ಗಳು ದುರುಪಯೋಗವಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆಯ ಕಾಂಗ್ರೆಸ್‌ ಸದಸ್ಯರು ಕಾರ್ಮಿಕ ಇಲಾಖೆಗೆ ಸಿಬ್ಬಂದಿಗೆ ಸೋಮವಾರ ಮನವಿ ಸಲ್ಲಿಸಿದರು    

ಹಾವೇರಿ: ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರ್‌ ಕಿಟ್‌ಗಳು ದುರುಪಯೋಗವಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಗರಸಭೆ ಕಾಂಗ್ರೆಸ್‌ ಸದಸ್ಯರು ಸೋಮವಾರ ಕಾರ್ಮಿಕ ಇಲಾಖೆ ಸಿಬ್ಬಂದಿಗೆ ಮನವಿ ಸಲ್ಲಿಸಿದರು.

ನೋಂದಾಯಿತ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರಿಗೆ ವಿತರಿಸುತ್ತಿರುವ ಆಹಾರ್‌ ಕಿಟ್‌ಗಳು ಉಳ್ಳವರ ಪಾಲಾಗುತ್ತಿವೆ. ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಹಂಚುತ್ತಿದ್ದು, ಅದನ್ನು ಪ್ರಶ್ನಿಸಿದರೆ, ಶಾಸಕರ ಹೇಳಿದ್ದಾರೆ ಎಂದು ಬೇಜವಾಜ್ದಾರಿ ಉತ್ತರ ನೀಡುತ್ತಾರೆ. ನಮ್ಮನ್ನು ಕೇಳಲು ನೀವು ಯಾರು? ಎಂದು ಉದ್ಧಟತನದಿಂದ ಮಾತನಾಡುತ್ತಾರೆ ಎಂದು ಆರೋಪಿಸಿದರು.

ಕಾರ್ಮಿಕ ಇಲಾಖೆಯಿಲ್ಲಿ ನೋಂದಣಿ ಮಾಡಿಕೊಂಡ ಕಾರ್ಮಿಕರಿಗೆ ಮಾತ್ರ ಕಿಟ್‌ಗಳನ್ನು ಇಲಾಖೆಯ ಸಿಬ್ಬಂದಿಯಿಂದಲೇ ವಿತರಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಕಾರ್ಮಿಕ ಇಲಾಖೆ ಕಚೇರಿ ಸಿಬ್ಬಂದಿಗೆ ಮನವಿ ಪತ್ರ ಸಲ್ಲಿಸಿದರು. ಕಾಂಗ್ರೆಸ್‌ ಮುಖಂಡರಾದ ಐ.ಯು.ಪಠಾಣ್‌, ಪಿ.ಎಂ. ಚೋಪದಾರ, ಸಂಜೀವ ನೇರಲಗಿ, ದಾದಾಪೀರ್‌ ಐ.ಚೂಡಿಗಾರ, ಎಸ್‌.ಎಸ್‌.ಡಂಬಳ, ಎನ್‌.ಎಂ.ತಳವಾರ, ಡಿ.ಬಿ.ವೆಂಕಟೇಶ, ಎಂ.ಟಿ.ಬಿಸ್ಟನವರ, ಸಿ.ಎಸ್‌.ಲಕ್ಷ್ಮೇಶ್ವರ ಮಠ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.