ADVERTISEMENT

ಮುದೇನೂರು ಗ್ರಾಮಕ್ಕೆ ಬಸ್‌ ಸೌಲಭ್ಯಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 15:41 IST
Last Updated 9 ಸೆಪ್ಟೆಂಬರ್ 2024, 15:41 IST
ರಾಣೆಬೆನ್ನೂರು ತಾಲ್ಲೂಕಿನ ಮುದೇನೂರು ಗ್ರಾಮಕ್ಕೆ ಸಮಪರ್ಕವಾಗಿ ಬಸ್‌ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ವಾಕರಾರ ಸಾರಿಗೆ ಸಂಸ್ಥೆ ಡಿಸಿ ಶಶಿಧರ ಕುಂಬಾರ ಅವರಿಗೆ ಮನವಿ ಸಲ್ಲಿಸಿದರು
ರಾಣೆಬೆನ್ನೂರು ತಾಲ್ಲೂಕಿನ ಮುದೇನೂರು ಗ್ರಾಮಕ್ಕೆ ಸಮಪರ್ಕವಾಗಿ ಬಸ್‌ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ವಾಕರಾರ ಸಾರಿಗೆ ಸಂಸ್ಥೆ ಡಿಸಿ ಶಶಿಧರ ಕುಂಬಾರ ಅವರಿಗೆ ಮನವಿ ಸಲ್ಲಿಸಿದರು   

ರಾಣೆಬೆನ್ನೂರು: ತಾಲ್ಲೂಕಿನ ಮುದೇನೂರು-ನಾಗೇನಹಳ್ಳಿ ಮಾರ್ಗದಲ್ಲಿ ಸಮರ್ಪಕವಾಗಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಒತ್ತಾಯಿಸಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾವೇರಿ ಜಿಲ್ಲೆಯ ವಾಕರಾರ ಸಾರಿಗೆ ಸಂಸ್ಥೆಯ ಡಿಸಿ ಶಶಿಧರ್ ಕುಂಬಾರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಬಸ್‌ನಲ್ಲಿ ಅಂಗವಿಕಲರಿಗೆ ಕಾಯ್ದಿರಿಸಿದ ಆಸನಗಳಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸುವಂತೆ ನಿರ್ವಾಹಕರಿಗೆ ಸೂಕ್ತ ಸುತ್ತೋಲೆ ಹೊರಡಿಸಬೇಕೆಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮನವಿ ಮಾಡಿದರು.

ಗಣೇಶ ನಂದಿಗಾವಿ, ಶಿವಕುಮಾರಸ್ವಾಮಿ ಮಠದ ಹಾಗೂ ಪದಾಧಿಕಾರಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.