ADVERTISEMENT

ಗೌರವಧನ ಹೆಚ್ಚಳಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 15:00 IST
Last Updated 2 ಡಿಸೆಂಬರ್ 2020, 15:00 IST
ಗೌರವಧನ ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘದ ವತಿಯಿಂದ ಹಾವೇರಿಯ ಜಿಲ್ಲಾಡಳಿತ ಭವನದ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು 
ಗೌರವಧನ ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರರ ಸಂಘದ ವತಿಯಿಂದ ಹಾವೇರಿಯ ಜಿಲ್ಲಾಡಳಿತ ಭವನದ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು    

ಹಾವೇರಿ: ರಾಜ್ಯದ 141 ವಿಶೇಷ ಶಾಲೆಗಳಿಗೆ ಶಿಶು ಕೇಂದ್ರೀಕೃತ ಸಹಾಯಧನ ಯೋಜನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕ/ ಶಿಕ್ಷಕಕೇತರ ಸಿಬ್ಬಂದಿಯ ಗೌರವಧನವನ್ನು ದ್ವಿಗುಣಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘದ ವತಿಯಿಂದ ಬುಧವಾರ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಯಿತು.

ವಿಶೇಷ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಸರಿಯಾದ ಸಮಯದಲ್ಲಿ ಗೌರವಧನ ದೊರಕದೆ ಹತಾಶರಾಗಿದ್ದಾರೆ. ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ಗಳು ಯಾವುದೇ ಸಿಬ್ಬಂದಿಯ ವೇತನ ಕಡಿತಗೊಳಿಸಬಾರದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿವೆ. ಹೀಗಾಗಿ ಸಂಕಷ್ಟದಲ್ಲಿರುವ ನಮಗೆ ನೆರವು ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಎಚ್‌.ಆರ್‌. ಶಿವಕುಮಾರ, ಕಾರ್ಯದರ್ಶಿ ಎಚ್‌.ಜೆ.ಜಾಡರ, ಖಜಾಂಚಿ ಸುಭಾಸ ಮಲ್ಲಾಡದ ಮುಂತಾದವರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.