ಹಾವೇರಿ: ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಸಂಘದ ಜಿಲ್ಲಾ ಶಾಖೆ ಹಾವೇರಿಯ ಪ್ರದಗ್ರಹಣ ಸಮಾರಂಭ ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಈಚೆಗೆ ನಡೆಯಿತು.
ಹಾವೇರಿಯ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಬಸವರಾಜ ಈಳಿಗೇರ, ಗೌರವಾಧ್ಯಕ್ಷರಾಗಿ ಎಚ್.ಎಂ.ನಾಯ್ಕ, ಉಪಾಧ್ಯಕ್ಷರಾಗಿ ಸಿ.ಬಿ.ಪಾಟೀಲ್, ಕಾರ್ಯದರ್ಶಿಯಾಗಿ ಮೋಹನ್ ಎಂ. ಹಲುವಾಗಲ, ಖಜಾಂಚಿಯಾಗಿ ಗುಡ್ಡಪ್ಪ ಸಿ, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಸ ಕುಮರಿ, ಜಂಟಿ ಕಾರ್ಯದರ್ಶಿಯಾಗಿ ಶಿವು ಬಣಕಾರ, ಸಂಚಾಲಕರಾಗಿ ಎಸ್.ಎಸ್. ಹಾವಣಗಿ ಆಯ್ಕೆಯಾದರು.
ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅಮೃತಗೌಡ ಪಾಟೀಲ್ ಹಾಗೂ ರಾಜ್ಯ ಪರಿಷತ್ ಸದಸ್ಯರಾದ ಎಸ್.ಜಿ ಸುಣಗಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.