ಸಾಂದರ್ಭಿಕ ಚಿತ್ರ
ರಾಣೆಬೆನ್ನೂರು (ಹಾವೇರಿ ಜಿಲ್ಲೆ): ತಾಲ್ಲೂಕಿನ ಪತ್ತೇಪುರ ಗ್ರಾಮದ ಜಮೀನಿನಲ್ಲಿ ಬುಧವಾರ ಬೆಳಿಗ್ಗೆ ವಿದ್ಯುತ್ ಸ್ಪರ್ಶದಿಂದ ಕರಬಸಪ್ಪ ಕಡೇನಾಯಕನಹಳ್ಳಿ (50) ಮತ್ತು ಅವರ ಪುತ್ರ ದರ್ಶನ (26) ಎಂಬುವರು ಮೃತಪಟ್ಟರು.
‘ನೀರೆತ್ತುವ ಮೋಟರ್ ಚಾಲು ಮಾಡುವಾಗ, ಅವಘಡ ಸಂಭವಿಸಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು. ಘಟನೆ ಕುರಿತು ಹೆಸ್ಕಾಂ ಅಧಿಕಾರಿಗಳಿಂದ ಮಾಹಿತಿ ಪಡೆದು, ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.