ADVERTISEMENT

ಸಾಲ: ತುಂಗಭದ್ರಾ ನದಿಗೆ ಹಾರಿ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 16:54 IST
Last Updated 13 ಆಗಸ್ಟ್ 2021, 16:54 IST
ರೈತ ಸಾವು–ಪ್ರಾತಿನಿಧಿಕ ಚಿತ್ರ
ರೈತ ಸಾವು–ಪ್ರಾತಿನಿಧಿಕ ಚಿತ್ರ   

ಗುತ್ತಲ: ತುಂಗಭದ್ರಾ ನದಿಗೆ ಹಾರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ತೇರದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಣ್ಣದುರಗಪ್ಪ ಗೊರವರ (58) ಆತ್ಮಹತ್ಯೆ ಮಾಡಿಕೊಂಡವರು.

ಬೆಳವಗಿ ಗ್ರಾಮದ ಕೆವಿಜಿ ಬ್ಯಾಂಕ್ ಮತ್ತು ಕೈಗಡವಾಗಿ ₹ 4 ಲಕ್ಷ ಸಾಲ ಮಾಡಿದ್ದರು. ಎರಡು ವರ್ಷಗಳಿಂದ ಬೆಳೆ ಸರಿಯಾಗಿ ಬಾರದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.