ADVERTISEMENT

‘ಮುಂಬಡ್ತಿ ಪ್ರಕರಣ ಸುಖಾಂತ್ಯಗೊಳ್ಳಲಿ’

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 14:44 IST
Last Updated 18 ಡಿಸೆಂಬರ್ 2020, 14:44 IST
ಹಾವೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ಹಿರಿಯ ಪಶುವೈದ್ಯಕೀಯ ಪರೀಕ್ಷಕರನ್ನು ಸನ್ಮಾನಿಸಲಾಯಿತು
ಹಾವೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದಿದ ಹಿರಿಯ ಪಶುವೈದ್ಯಕೀಯ ಪರೀಕ್ಷಕರನ್ನು ಸನ್ಮಾನಿಸಲಾಯಿತು   

ಹಾವೇರಿ: ನಗರದ ಪಶುವೈದ್ಯಕೀಯ ಪಾಲಿಕ್ಲಿನಿಕ್‌ ಸಭಾ ಭವನದಲ್ಲಿ ನಡೆದ ಪಶುವೈದ್ಯಕೀಯ ಪರೀಕ್ಷಕರ ಸಂಘದ ಜಿಲ್ಲಾ ಘಟಕದ ಸಾಮಾನ್ಯ ಸಭೆಯಲ್ಲಿ ನಿವೃತ್ತ ನೌಕರರ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ನಿವೃತ್ತಿ ಹೊಂದಿದ ಹಿರಿಯ ಪಶುವೈದ್ಯಕೀಯ ಪರೀಕ್ಷಕರಾದ ಚೇತನ ಶಿಬ್ರಕೇರಿ, ಐ.ಎ.ಬಡಿಗೇರ, ಬಸಪ್ಪ ಮುದ್ದಿ, ಪಿ.ಕೆ.ಕರಾಟೆ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಶೇ 96 ಅಂಕ ಗಳಿಸಿದ ಅನಿಕೇತನ ಸೂರಿ ಅವರನ್ನು ಸನ್ಮಾನಿಸಲಾಯಿತು.

ಹಿರಿಯ ಪಶುವೈದ್ಯಕೀಯ ಪರೀಕ್ಷಕ ಉಮಾಕಾಂತ ದಶಮಾನೆ ಮಾತನಾಡಿ, ‘ಸರ್ಕಾರ ಮುಂಬಡ್ತಿ ಆದೇಶವನ್ನು ರದ್ದು ಮಾಡಿರುವುದರಿಂದ ನೂರಾರು ನೌಕರರು ಹಿಂಬಡ್ತಿ ಹೊಂದಿ ತೊಂದರೆ ಅನುಭವಿಸುವಂತಾಗಿದೆ. ಸುಮಾರು 800 ಕಿ.ಮೀ. ದೂರದಿಂದ ಬಂದು ಇಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಮುಂಬಡ್ತಿ ಪ್ರಕರಣವನ್ನು ಸುಖಾಂತ್ಯಗೊಳಿಸಲು ಸಂಘದಿಂದ ತುರ್ತು ಪ್ರಯತ್ನ ಆಗಬೇಕು’ ಎಂದು ಹೇಳಿದರು.

ADVERTISEMENT

ಸಂಘದ ಅಧ್ಯಕ್ಷ ಜೆ.ಎಸ್.ಅಗಸರ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಂಘದ ಪ್ರತಿನಿಧಿ ಎನ್.ಎಚ್.ಬಣಕಾರ, ಎಸ್.ಎಫ್. ಕರಿಯಪ್ಪನವರ, ಸಿ.ಡಿ.ಯತ್ನಳ್ಳಿ, ಬಿ.ಐ.ಆಡೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.