ADVERTISEMENT

ಹಾವೇರಿಯಲ್ಲಿ ಬೆಂಕಿ ಅವಘಡ: ಟಿ.ವಿ, ಫ್ರಿಡ್ಜ್‌ ನಾಶ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 14:12 IST
Last Updated 13 ಜೂನ್ 2020, 14:12 IST
ಹಾವೇರಿಯ ಅಂಬೇಡ್ಕರ್ ನಗರದ ರತ್ನವ್ವ ಗಾಳೆಪ್ಪನವರ ಎಂಬುವರ ಮನೆಯಲ್ಲಿ ಬೆಂಕಿ ಆಕಸ್ಮಿಕದಿಂದ ವಸ್ತುಗಳು ಸುಟ್ಟು ಕರಕಲಾಗಿರುವುದು 
ಹಾವೇರಿಯ ಅಂಬೇಡ್ಕರ್ ನಗರದ ರತ್ನವ್ವ ಗಾಳೆಪ್ಪನವರ ಎಂಬುವರ ಮನೆಯಲ್ಲಿ ಬೆಂಕಿ ಆಕಸ್ಮಿಕದಿಂದ ವಸ್ತುಗಳು ಸುಟ್ಟು ಕರಕಲಾಗಿರುವುದು    

ಹಾವೇರಿ:ಆಕಸ್ಮಿಕ ಬೆಂಕಿ ಅವಘಡದಿಂದ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಇಲ್ಲಿನ ಅಂಬೇಡ್ಕರ್ ನಗರದಲ್ಲಿ ಶನಿವಾರ ನಡೆದಿದೆ.

ಅಂಬೇಡ್ಕರ್ ನಗರದ ರತ್ನವ್ವ ಗಾಳೆಪ್ಪನವರ ಎಂಬುವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಟಿ.ವಿ. ಪ್ರಿಡ್ಜ್, ಕ್ಯಾಮೆರಾ ಲೆನ್ಸ್, ಮಂಚ, ಬಟ್ಟೆಗಳು ಸೇರಿದಂತೆ ಸುಮಾರು ₹8 ಲಕ್ಷಕ್ಕೂ ಅಧಿಕ ಮೊತ್ತದ ವಸ್ತುಗಳು ಬೆಂಕಿಯಲ್ಲಿ ಬೆಂದು ಹೋಗಿವೆ.

ಬೆಂಕಿ ಅವಘಡ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಸ್ಥಳಕ್ಕೆ ಆಗಮಿಸಿದ‌ ಹಾವೇರಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.