
ಪ್ರಜಾವಾಣಿ ವಾರ್ತೆ
ಹಾವೇರಿ: ಪಡಿತರ ಚೀಟಿ ಮಾಡಿಸಿಕೊಟ್ಟಿದ್ದಕ್ಕೆ ₹ 5000 ಲಂಚ ಪಡೆದ ಆರೋಪದಡಿ ಆಹಾರ ನಿರೀಕ್ಷಕ (ಪ್ರಭಾರ) ವಿಜಯಕುಮಾರ ಗುಡಗೇರಿ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
'ಹಾವೇರಿ ತಾಲ್ಲೂಕಿನ ಪ್ರಭಾರ ಆಹಾರ ನಿರೀಕ್ಷಕ ವಿಜಯಕುಮಾರ, ಹಿರೇಲಿಂಗದಹಳ್ಳಿಯ ಬೀರಪ್ಪ ಕಾಶಂಬಿ ಅವರಿಗೆ ಪಡಿತರ ಚೀಟಿ ಮಾಡಿಕೊಟ್ಟಿದ್ದ. ಇದಕ್ಕಾಗಿ ಫೋನ್ ಪೇ ಮೂಲಕ ಲಂಚ ಪಡೆದಿದ್ದ. ಬೀರಪ್ಪ ಅವರ ಸಂಬಂಧಿ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿ ವಿಜಯಕುಮಾರ ಅವರನ್ನು ಬಂಧಿಸಲಾಗಿದೆ' ಎಂದು ಡಿವೈಎಸ್ಪಿ ಮಧುಸೂದನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.