ADVERTISEMENT

ಹಾವೇರಿ: ಬಿಸಿ ಸಾಂಬಾರ ಪಾತ್ರೆಯಲ್ಲಿ ಬಿದ್ದು ಬಾಲಕಿ ಸಾವು

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 15:40 IST
Last Updated 20 ಜೂನ್ 2025, 15:40 IST
ರುಕ್ಸಾನಾಬಾನು ಶೇಖಸನದಿ
ರುಕ್ಸಾನಾಬಾನು ಶೇಖಸನದಿ   

ಹಾವೇರಿ: ಮದುವೆ ಊಟಕ್ಕೆ ಸಿದ್ಧಪಡಿಸಿದ್ದ ಬಿಸಿ ಸಾಂಬಾರಿನ ಪಾತ್ರೆಯಲ್ಲಿ ಬಿದ್ದು ಗಾಯಗೊಂಡಿದ್ದ ಎರಡೂವರೆ ವರ್ಷದ ರುಕ್ಸಾನಾಬಾನು ಮುಕ್ತುಂಸಾಬ್ ಶೇಖಸನದಿ ಎಂಬ ಬಾಲಕಿ ಹುಬ್ಬಳ್ಳಿಯ ಕೆಎಂಸಿ–ಆರ್‌ಐ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾಳೆ.

‘ಹುಬ್ಬಳ್ಳಿ ತಾಲ್ಲೂಕಿನ ಚನ್ನಾಪುರದ ರುಕ್ಸಾನಾಬಾನು ಪೋಷಕರ ಜೊತೆ ಶಿಗ್ಗಾವಿ ತಾಲ್ಲೂಕಿನ ಕುನ್ನೂರು ಗ್ರಾಮದ ಶರೀಫಸಾಬ ಯರಗುಪ್ಪಿ ಅವರ ಮನೆಗೆ ಜೂನ್ 14ರಂದು ಮದುವೆಗೆ ಬಂದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಆಟವಾಡುವಾಗ, ಬಾಲಕಿಯು ಆಯ ತಪ್ಪಿ ಸಾಂಬಾರ ಪಾತ್ರೆಯಲ್ಲಿ ಬಿದ್ದಳು. ಆಕೆಗೆ ಸುಟ್ಟ ಗಾಯಗಳಾದವು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಕೆಎಂಸಿ–ಆರ್‌ಐ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ತಡಸ ಠಾಣೆಯ ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT