ADVERTISEMENT

ಸರ್ಕಾರಿ ನೌಕರರು ಲಸಿಕೆ ಹಾಕಿಸಿಕೊಳ್ಳಿ: ಎಸ್.ವಿ. ಸಂಕನೂರ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 14:13 IST
Last Updated 30 ಏಪ್ರಿಲ್ 2021, 14:13 IST
–
   

ಹಾವೇರಿ:ಕೋವಿಡ್‌ ಎರಡನೇ ಅಲೆಯಿಂದ ರಕ್ಷಿಸಿಕೊಳ್ಳಲು ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಲಸಿಕೆ ಹಾಕಿಸಿಕೊಳ್ಳಲು ವಿಧಾನ ಪರಿಷತ್ ಸದಸ್ಯರು ಎಸ್.ವಿ. ಸಂಕನೂರ ಕರೆ ನೀಡಿದರು.

ಜಿಲ್ಲಾ ಗುರುಭವನದಲ್ಲಿ ಶುಕ್ರವಾರ ನಡೆದ ಕೋವಿಡ್ ಜಾಗೃತಿ ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯ ಸರ್ಕಾರಿ ನೌಕರರು ಶೇಕಡಾ 100ರಷ್ಟು ಲಸಿಕೆ ಹಾಕಿಸಿಕೊಂಡು ತಮ್ಮ ಕುಟುಂಬ ಪರಿವಾರದವರಿಗೂ ಹಾಕಿಸಲು ತಿಳಿಸಿದರು. ಎಲ್ಲರೂ ಕೋವಿಡ್‌ ರೋಗದಿಂದ ದೂರ ಉಳಿಯಲು ಮುಂಜಾಗ್ರತೆ ವಹಿಸಿ.ಜನತಾ ಕರ್ಫ್ಯೂ ಇದ್ದಾಗಲೂ 45 ವರ್ಷ ಮೀರಿದ ಎಲ್ಲರೂ ಲಸಿಕೆಯನ್ನು ಹಾಕಿಸಿಕೊಳ್ಳಲಿಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಲಸಿಕಾ ಅಭಿಯಾನವನ್ನು ಎಲ್ಲ ನೌಕರರು ಅಧಿಕಾರಿಗಳು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ADVERTISEMENT

ಡಿಡಿಪಿಐ ಅಂದಾನಪ್ಪ ವಡಗೇರಿ, ಡಿಡಿಪಿಯು ನಾಗರಾಜಪ್ಪ, ಬಿಇಒ ಎಂ.ಎಚ್. ಪಾಟೀಲ, ಹಾವೇರಿ ಕ.ರಾ.ಸ.ನೌ.ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಅಮೃತಗೌಡ ಬ. ಪಾಟೀಲ, ಸಮನ್ವಯಾಧಿಕಾರಿ ಸಿ.ಎಸ್. ಭಗವಂತಗೌಡ್ರ, ಕ.ರಾ.ಪ್ರಾ.ಶಾ.ಶಿ. ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಪಿ.ಟಿ. ಕಾಮನಹಳ್ಳಿ, ರಾಜ್ಯ ಉಪಾಧ್ಯಕ್ಷರು ಜೆ.ಆರ್. ಯಲವದಹಳ್ಳಿ, ಪ್ರಧಾನ ಕಾರ್ಯದರ್ಶಿ ಎಂ.ಎ. ಎಣ್ಣಿ, ಗೌರವಾಧ್ಯಕ್ಷರು ಎಚ್.ಡಿ. ಗಂಟೇರ, ಸಿ.ಜಿ. ಬ್ಯಾಡಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.