ADVERTISEMENT

ಕನಕ ಗುರುಪೀಠದಲ್ಲಿ ‘ಗುರು ಪೂರ್ಣಿಮೆ’

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 16:41 IST
Last Updated 24 ಜುಲೈ 2021, 16:41 IST
ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ ಅವರನ್ನು ಗುರುಪೂರ್ಣಿಮೆ ನಿಮಿತ್ಯ ಭಕ್ತರು ಸನ್ಮಾನಿಸಿದರು
ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ ಅವರನ್ನು ಗುರುಪೂರ್ಣಿಮೆ ನಿಮಿತ್ಯ ಭಕ್ತರು ಸನ್ಮಾನಿಸಿದರು   

ಬ್ಯಾಡಗಿ: ತಾಲ್ಲೂಕಿನ ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರು ಪೀಠದಲ್ಲಿ ಬ್ರಹ್ಮಲೀನ ಜಗದ್ಗುರು ಬೀರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿಗಳ 15ನೇ ವರ್ಷದ ಪುಣ್ಯಾರಾಧನೆ ಹಾಗೂ ಗುರುಪೂರ್ಣಿಮೆ ಕಾರ್ಯಕ್ರಮ ಶನಿವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ನಿರಂಜನಾಂದಪುರಿ ಸ್ವಾಮೀಜಿಗೆ ಭಕ್ತರು ಪುಷ್ಪಾರ್ಚನೆ ಮಾಡಿ, ಸನ್ಮಾನಿಸಿದರು. ಬಳಿಕ ಆಶೀರ್ವಚನ ನೀಡಿದ ಸ್ವಾಮೀಜಿ, ನಮ್ಮ ದೇಶದಲ್ಲಿ ಗುರುವನ್ನು ದೇವರ ಸಮಾನವಾಗಿ ಕಾಣಲಾಗುತ್ತದೆ. ತನ್ನಲ್ಲಿರುವ ಅಪಾರ ಜ್ಞಾನವನ್ನು ಧಾರೆ ಎರೆಯುವ ಗುರುವಿಗೆ ಪೂಜ್ಯ ಭಾವನೆಯಿಂದ ನಮಿಸಲಾಗುತ್ತದೆ. ಪ್ರತಿಯೊಂದು ಹಂತದಲ್ಲಿಯೂ ಗುರುವಿನ ಮಾರ್ಗದರ್ಶನ ಅವಶ್ಯವಾಗಿದೆ’ ಎಂದು ಅವರು ಹೇಳಿದರು.

ಬೆಳಿಗ್ಗೆ ರೇವಣಸಿದ್ಧೇಶ್ವರ, ಬೀರಲಿಂಗೇಶ್ವರ, ಮೈಲಾರಲಿಂಗೇಶ್ವರ, ಮಹಾಸಿದ್ಧೇಶ್ವರಿ, ಭಕ್ತ ಕನಕದಾಸರು, ಬ್ರಹ್ಮಲೀನ್ ಜಗದ್ಗುರುಗಳ ರುದ್ರಾಭಿಷೇಕವನ್ನು ನೆರವೇರಿಲಾಯಿತು.

ADVERTISEMENT

ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಬಸವರಾಜ ಶಿವಣ್ಣನವರ, ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಆರ್.ಪಾಟೀಲ. ಗುರು ಪೀಠದ ಆಡಳಿತಾಧಿಕಾರಿ ಎಸ್‌ಎಫ್‌ಎನ್ ಗಾಜಿಗೌಡ್ರ, ಮುಖಂಡರಾದ ಶಂಕ್ರಣ್ಣ ಮಾತನವರ, ರಾಜೇಂದ್ರ ಹಾವೇರಣ್ಣನವರ, ಕುರುಬರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.