
ಪ್ರಜಾವಾಣಿ ವಾರ್ತೆ
ಹಾವೇರಿ: ‘ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಪಡ್ಯಂತ್ರ ನಡೆದಿದೆ. ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನವಾಗಿದೆ. ಲಂಚ ಪಡೆಯುವಂತೆ ಒತ್ತಾಯ ಮಾಡುವುದೂ ತಪ್ಪು. ಹೀಗಾಗಿ, ಪ್ರಕರಣದ ಬಗ್ಗೆ ಎಲ್ಲ ಆಯಾಮಗಳಲ್ಲಿ ತನಿಖೆಯಾಗಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ನಗರದಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಜನರು ಬಂದಿರುತ್ತಾರೆ. ಅದರಲ್ಲಿ ಯಾವುದೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ. ತನಿಖೆಯಿಂದ ಸತ್ಯಾಸತ್ಯತೆ ಹೊರ ಬರುತ್ತದೆ. ಯಾವುದೇ ಒಬ್ಬರ ಸಾರ್ವಜನಿಕರ ಜೀವನವನ್ನು ಪಡ್ಯಂತ್ರದಿಂದ ಮುಗಿಸುವ ಕೆಲಸವನ್ನೂ ಯಾರೂ ಪೋತ್ಸಾಹಿಸಬಾರದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.