ADVERTISEMENT

ಶರಣರ ಆದರ್ಶ ಸಮಾಜಕ್ಕೆ ದಾರಿದೀಪ

ಜಿಲ್ಲಾ ಪಂಚಾಯತ್ ಸಿಇಒ ರಮೇಶ ದೇಸಾಯಿ ಅಭಿಮತ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 16:03 IST
Last Updated 27 ಫೆಬ್ರುವರಿ 2020, 16:03 IST
ಹಾವೇರಿ ದೇವರಾಜ ಅರಸು ಭವನದಲ್ಲಿ ಗುರುವಾರ ನಡೆದ ಕಾಯಕ ಶರಣ ಜಯಂತಿ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾದ ಕಮಲವ್ವ ಪಾಟೀಲ ಉದ್ಘಾಟಿಸಿದರು
ಹಾವೇರಿ ದೇವರಾಜ ಅರಸು ಭವನದಲ್ಲಿ ಗುರುವಾರ ನಡೆದ ಕಾಯಕ ಶರಣ ಜಯಂತಿ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾದ ಕಮಲವ್ವ ಪಾಟೀಲ ಉದ್ಘಾಟಿಸಿದರು   

ಹಾವೇರಿ: ಮೌಲ್ಯಯುತ ಜೀವನ ನಡೆಸುವ ಮೂಲಕ ಸಮಾಜಕ್ಕೆ ಜ್ಞಾನದ ಬೆಳಕು ನೀಡಿದ ಕಾಯಕ ಶರಣರ ಆದರ್ಶಗಳು ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ಜಿಲ್ಲಾ ಪಂಚಾಯತ್ ಸಿಇಒ ರಮೇಶ ದೇಸಾಯಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಡಿ.ದೇವರಾಜ ಅರಸು ಭವನದಲ್ಲಿ ಗುರುವಾರ ನಡೆದ ಕಾಯಕ ಶರಣಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಯಕ ಶರಣರಾದ ಮಾದಾರ ಚನ್ನಯ್ಯ, ಉರಿಲಿಂಗ ಪೆದ್ದಿಯವರ, ಡೋಹರ ಕಕ್ಕಯ್ಯ, ಮಾದಾರ ದೂಳಯ್ಯ, ಸಮಗಾರ ಹರಳಯ್ಯನವರು 12ನೇ ಶತಮಾನದಲ್ಲೆ ವಚನ ಕ್ರಾಂತಿಯನ್ನುಂಟು ಮಾಡಿದರು. ಜನ ಸಾಮಾನ್ಯರಿಗೂ ಅರ್ಥವಾಗುವಂತೆಸರಳ ಪದಗಳ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ ಎಂದರು.

ADVERTISEMENT

ವಚನಕಾರರು ಸಮಾಜದಲ್ಲಿನಅಸ್ಪೃಶ್ಯತೆ, ಅಸಮಾನತೆ, ಮೂಢನಂಬಿಕೆ, ತಾರತಮ್ಯದ ಮನೋಭಾವನೆಯನ್ನು ಹೋಗಲಾಡಿಸಲು ಸಾಕಷ್ಟು ಶ್ರಮ ವಹಿಸಿದ್ದಾರೆ. ತಾವು ಮಾಡುವ ಕಾಯಕದಲ್ಲೇ ದೇವರನ್ನು ಕಂಡವರು. ಮೇಲು-ಕೀಳು ಎನ್ನದೇ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ಆದಿಜಾಂಬವ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಮಾಳಗಿ ಮಾತನಾಡಿ, ಶಿವಶರಣರು ನಡೆದು ಬಂದ ದಾರಿ ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ಉಪನ್ಯಾಸ ನೀಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾದ ಕಮಲವ್ವ ಹೇಮನಗೌಡ ಪಾಟೀಲ ಉದ್ಘಾಟಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ ಅಧ್ಯಕ್ಷತೆ ವಹಿಸಿದ್ದರು. ಡಿವೈಎಸ್ಪಿ ವಿಜಯಕುಮಾರ ಸಂತೋಷ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.