ಹಿರೇಕೆರೂರ: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬಹುದಿನಗಳಿಂದ ಬೇಡಿಕೆಯಿದ್ದ ಮಾರ್ಗದಲ್ಲಿ ಬಸ್ ಸೇವೆ ಆರಂಭೀಸಲಾಗಿದೆ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.
ತಾಲೂಕಿನ ಗೊಡಚಿಕೊಂಡ ಗ್ರಾಮದಲ್ಲಿ ಸೋಮುವಾರ ಬಾಳಂಬೀಡ , ಹಾದ್ರಿಹಳ್ಳಿ, ಯತ್ತಿನಹಳ್ಳಿ ಎಂ ಕೆ , ಗೊಡಚಿಕೊಂಡ ಮಾರ್ಗವಾಗಿ ನೂಲಗೇರಿ ನೂತನ ಬಸ್ ಮಾರ್ಗಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ಯಾರಂಟಿ ಅನುಷ್ಟಾನ ಕಮಿಟಿ ಅಧ್ಯಕ್ಷ ಮಲ್ಲಿಕಾರ್ಜುನ ಬುರುಡಿಕಟ್ಟಿ, ಕೆ ಎಂ ಎಫ್ ಉಪಾಧ್ಯಕ್ಷ ಉಜ್ಜನಗೌಡ ಮಾವಿನತೋಪ , ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಿರೇಕೆರೂರು ಘಟಕದ ವ್ಯವಸ್ಥಪಕ ಮಂಜುನಾಥ ಹಡಪದ , ಕಲ್ಲನಗೌಡ ಪಾಟೀಲ್, ಈರನಗೌಡ ಸಂಕೊಳ್ಳಿ, ಮತ್ತು ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.