
ಪ್ರಜಾವಾಣಿ ವಾರ್ತೆ
ಹಾವೇರಿ: ‘ಕಾಮಗಾರಿ ಪೂರ್ಣಗೊಂಡ ಬಗ್ಗೆ ಪರಿಶೀಲನಾ ವರದಿ ನೀಡಲು ₹ 40 ಸಾವಿರ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಹೆಸ್ಕಾಂ ಸಹಾಯಕ ಎಂಜಿನಿಯರ್ ಬಿ.ಮಿಥುನಗೌಡ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
‘ಎಲೆಕ್ಟ್ರಿಕ್ ಗುತ್ತಿಗೆದಾರ ವಿನೋದಕುಮಾರ ನೀಡಿದ್ದರು. ದೂರು ಆಧರಿಸಿ ದಾಳಿ ನಡೆಸಿದ್ದು, ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಲಂಚ ಪಡೆಯುವಾಗಪುರಾವೆ ಸಹಿತ ಬಂಧಿಸಲಾಯಿತು’ ಎಂದು ಲೋಕಾಯುಕ್ತ ಡಿವೈಎಸ್ಪಿ ಸಿ. ಮಧುಸೂದನ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.