ADVERTISEMENT

ರಾಣೆಬೆನ್ನೂರು | ಗೃಹಪ್ರವೇಶದ ಊಟ ಸೇವಿಸಿ 37 ಮಂದಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2023, 15:34 IST
Last Updated 26 ಆಗಸ್ಟ್ 2023, 15:34 IST
ರಾಣೆಬೆನ್ನೂರು ತಾಲ್ಲೂಕಿನ ತಿಮ್ಮೇನಹಳ್ಳಿ ಗ್ರಾಮದ ಗೃಹ ಪ್ರವೇಶದ ಊಟ ಸೇವಿಸಿ ಅಸ್ವಸ್ಥಗೊಂಡಿದ್ದ 37ಕ್ಕೂ ಹೆಚ್ಚು ಜನರಿಗೆ ತುಮ್ಮಿನಕಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು
ರಾಣೆಬೆನ್ನೂರು ತಾಲ್ಲೂಕಿನ ತಿಮ್ಮೇನಹಳ್ಳಿ ಗ್ರಾಮದ ಗೃಹ ಪ್ರವೇಶದ ಊಟ ಸೇವಿಸಿ ಅಸ್ವಸ್ಥಗೊಂಡಿದ್ದ 37ಕ್ಕೂ ಹೆಚ್ಚು ಜನರಿಗೆ ತುಮ್ಮಿನಕಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು   

ರಾಣೆಬೆನ್ನೂರು (ಹಾವೇರಿ ಜಿಲ್ಲೆ): ತಾಲ್ಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಗೃಹಪ್ರವೇಶದ ಊಟ ಸೇವಿಸಿ 37 ಮಂದಿ ಅಸ್ವಸ್ಥಗೊಂಡಿದ್ದಾರೆ.

ಗ್ರಾಮದ ಬಸವರಾಜ ಶೇಖಪ್ಪ ಶಾಂತನವರ ಅವರ ಗೃಹಪ್ರವೇಶ ಶುಕ್ರವಾರ ಇತ್ತು. ಕಾರ್ಯಕ್ರಮದಲ್ಲಿ ಊಟ ಮಾಡಿದ ಜನರು ರಾತ್ರಿ ವಾಂತಿಬೇಧಿಯಿಂದ ಬಳಲಿ ಅಸ್ವಸ್ಥಗೊಂಡರು. ಶನಿವಾರ ಬೆಳಿಗ್ಗೆ ತುಮ್ಮಿನಕಟ್ಟಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು.

ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಗೋವಿಂದ ನೇತೃತ್ವದಲ್ಲಿ 37 ಜನರಿಗೂ ಚಿಕಿತ್ಸೆ ನೀಡಿದರು. ಸುದ್ದಿ ತಿಳಿದ ಶಾಸಕ ಪ್ರಕಾಶ ಕೋಳಿವಾಡ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

ADVERTISEMENT

ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಅಸ್ವಸ್ಥಗೊಂಡ ಜನರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.