ADVERTISEMENT

ಮರಳು ಅಕ್ರಮ ಗಣಿಗಾರಿಕೆ; ಎರಡು ತೆಪ್ಪ ನಾಶ

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 16:46 IST
Last Updated 18 ಜೂನ್ 2021, 16:46 IST
ಕಂಚಾರಗಟ್ಟಿ ಗ್ರಾಮದಲ್ಲಿ ಮರಳು ಅಕ್ರಮ ಗಣಿಗಾರಿಕೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಎರಡು ಕಬ್ಬಿಣದ ತೆಪ್ಪಗಳನ್ನು ಜೆಸಿಬಿ ಮೂಲಕ ಜಖಂಗೊಳಿಸಿದರು
ಕಂಚಾರಗಟ್ಟಿ ಗ್ರಾಮದಲ್ಲಿ ಮರಳು ಅಕ್ರಮ ಗಣಿಗಾರಿಕೆ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಎರಡು ಕಬ್ಬಿಣದ ತೆಪ್ಪಗಳನ್ನು ಜೆಸಿಬಿ ಮೂಲಕ ಜಖಂಗೊಳಿಸಿದರು   

ಗುತ್ತಲ: ಇಲ್ಲಿಗೆ ಸಮೀಪದ ಕಂಚಾರಗಟ್ಟಿ ಗ್ರಾಮದ ತುಂಗಭದ್ರಾ ನದಿಯ ದಡದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದವರ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಎರಡು ತೆಪ್ಪಗಳನ್ನು ಜೆಸಿಬಿ ಸಹಾಯದಿಂದ ನಾಶಪಡಿಸಿದರು.

ಹಾವನೂರ, ಕಂಚಾರಗಟ್ಟಿ ಮತ್ತು ಹರಳಹಳ್ಳಿ ಗ್ರಾಮಗಳ ತುಂಗಭದ್ರಾ ನದಿಯ ದಡದಲ್ಲಿ ನಿರಂತರವಾಗಿ ಮರಳು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ದಾಳಿಯ ಸಂದರ್ಭದಲ್ಲಿ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ ಕೆ, ಭೂ ವಿಜ್ಞಾನಿ ಮಧುಸೂದನ್ ಎಸ್.ಬಿ.ಈರಣ್ಣ ಹುಲ್ಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT