ADVERTISEMENT

ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಅಕ್ರಮ ದಾಸ್ತಾನು: 210 ಮೆಟ್ರಿಕ್ ಟನ್ ಮರಳು ವಶ

ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಅಕ್ರಮ ದಾಸ್ತಾನು: ಅಧಿಕಾರಿಗಳ ದಾಳಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 14:26 IST
Last Updated 25 ನವೆಂಬರ್ 2020, 14:26 IST
   

ಹಾವೇರಿ: ರಾಣೆಬೆನ್ನೂರು ತಾಲ್ಲೂಕಿನ ಉದಗಟ್ಟಿ ಗ್ರಾಮದ ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಿದ್ದ 210 ಮೆಟ್ರಿಕ್ ಟನ್ ಮರಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ತಂಡ ದಾಳಿ ನಡೆಸಿ ವಶಪಡಿಸಿಕೊಂಡಿದೆ.

ಅನಧಿಕೃತವಾಗಿ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಪುಷ್ಪಾವತಿ ಕೆ.ಎನ್. ಹಾಗೂ ಭೂವಿಜ್ಞಾನಿ ಶ್ರೀನಿವಾಸ ಅವರು ಮಂಗಳವಾರ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸದಾನಂದ, ಗ್ರಾಮ ಲೆಕ್ಕಾಧಿಕಾರಿ ಎಸ್.ಎನ್. ಸುರೇಶ, ಪೊಲೀಸ್ ಸಿಬ್ಬಂದಿ ಎಸ್.ಎನ್.ಮೆಡ್ಲೇರಿ ಅವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅನಧಿಕೃತವಾಗಿ ದಾಸ್ತಾನು ಮಾಡಲಾದ ಮರಳನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಳ್ಳಲಾದ ಮರಳನ್ನು ಹಾವೇರಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ತೀರ್ಮಾನದಂತೆ ರಾಜಧನ ಪಾವತಿಸಿಕೊಂಡು ಸರ್ಕಾರಿ ಕಾಮಗಾರಿಗೆ ವಿಲೇವಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಪುಷ್ಪಾವತಿ ಕೆ.ಎನ್. ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.