ಹಾವೇರಿ: ರಾಷ್ಟ್ರಮಟ್ಟದ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯಿಂದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯಮಟ್ಟದ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆ ನಡೆಯಿತು. ಜಿಲ್ಲೆಯಿಂದ 54 ವಿದ್ಯಾರ್ಥಿಗಳು ಭಾಗವಹಿಸಿದ್ದರು.ರಾಷ್ಟ್ರಮಟ್ಟಕ್ಕೆ ಒಟ್ಟು 71 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ರಾಣೆಬೆನ್ನೂರು ತಾಲ್ಲೂಕು ಕುಮಾರಪಟ್ಟಣದ ಆದಿತ್ಯ ಬಿರ್ಲಾ ಪಬ್ಲಿಕ್ ಸ್ಕೂಲ್ನ ಪ್ರಮಥ ಎಸ್.ದೇವಾಂಗದ, ಹಾವೇರಿಯ ಕೇಂದ್ರೀಯ ವಿದ್ಯಾಲಯದ ಸೃಜನ್ ಹಾಗೂ ಶಿಗ್ಗಾವಿಯ ಮಾಮ್ಲೆ ದೇಸಾಯಿ ಸ್ಕೂಲ್ನ ಅಕ್ಕಮ್ಮ ದೊಡ್ಡಮನಿ ಅವರು ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ ಎಂದು ಡಯಟ್ ಪ್ರಾಂಶುಪಾಲ ಜಿ.ಎಂ. ಬಸವಲಿಂಗಪ್ಪ ಪ್ರಕಟಣೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.