ADVERTISEMENT

ಸೋತ ಬಿಜೆಪಿ ಅಭ್ಯರ್ಥಿಗೆ ಧೈರ್ಯ ತುಂಬಿದ ಕೆ.ಬಿ. ಕೋಳಿವಾಡ  

​ಪ್ರಜಾವಾಣಿ ವಾರ್ತೆ
Published 14 ಮೇ 2023, 15:47 IST
Last Updated 14 ಮೇ 2023, 15:47 IST
ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಚುನಾವಣೆಯಲ್ಲಿ ಪರಾಜಿತಗೊಂಡಿದ್ದಕ್ಕೆ ಅವರ ನಿವಾಸಕ್ಕೆ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಭೇಟಿ ನೀಡಿ ಧೈರ್ಯ ಹೇಳಿದರು
ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಚುನಾವಣೆಯಲ್ಲಿ ಪರಾಜಿತಗೊಂಡಿದ್ದಕ್ಕೆ ಅವರ ನಿವಾಸಕ್ಕೆ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಭೇಟಿ ನೀಡಿ ಧೈರ್ಯ ಹೇಳಿದರು   

ರಾಣೆಬೆನ್ನೂರು: ಚುನಾವಣೆಯಲ್ಲಿ ಸೋಲು ಗೆಲುವು ಸಹಜ, ಸೋಲಿಗೆ ಧೃತಿಗೆಡದೆ. ಮುಂದಿನ ಅವಕಾಶಕ್ಕಾಗಿ ಕಾರ್ಯ ಪ್ರವೃತ್ತರಾಗಬೇಕು. ಸಂಘಟಿತರಾಗಿ ಕೆಲಸ ಮಾಡಬೇಕು. ಇನ್ನು ಹೆಚ್ಚು ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳಿ ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಅವರಿಗೆ ವಿಧಾನ ಸಭೆ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಧೈರ್ಯ ತುಂಬಿದರು.

ವಿನಾಯಕನಗರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಅವರ ನಿವಾಸಕ್ಕೆ ಭಾನುವಾರ ತೆರಳಿ ಚುನಾವಣೆಯಲ್ಲಿ ಪರಾಜಿತಗೊಂಡಿದ್ದಕ್ಕೆ ಅವರೊಂದಿಗೆ ಮಾತನಾಡಿ ಧೈರ್ಯ ತುಂಬಿದರು.

ರಾಜಕಾರಣದಲ್ಲಿ ಇದೆಲ್ಲ ಸಹಜ. ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಯಶಸ್ಸಿಗೆ ದಾರಿ ಕಂಡುಕೊಳ್ಳಬೇಕು. ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಂಗಳಗೌರಿ ಪೂಜಾರ, ಶಿವಕುಮಾರ ನರಸಗೊಂಡರ, ಸಿದ್ದು ಚಿಕ್ಕಬಿದರಿ, ಮೃತ್ಯುಂಜಯ ಕಾಕೋಳ, ದಯಾನಂದ ದೇವಗೊಂಡನಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.