ಕಲಘಟಗಿ: ಸುಸಜ್ಜಿತ ಗ್ರಂಥಾಲಯ ಕಟ್ಟಡದಿಂದ ವಿದ್ಯಾರ್ಥಿಗಳಿಗೆ ಹಾಗೂ ಓದುಗರಿಗೆ ಅನುಕೂಲವಾಗಲಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗದಿತ ಅವಧಿಯಲ್ಲಿ ಮುಗಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಪಟ್ಟಣದ ಯುವ ಶಕ್ತಿ ವೃತ್ತದ ಹತ್ತಿರ ಪಟ್ಟಣ ಪಂಚಾಯಿತಿ ನಗರೋತ್ಥಾನ ಯೋಜನೆಯಡಿ ₹ 2.20 ಕೋಟಿ ವೆಚ್ಚದ ನೂತನ ಗ್ರಂಥಾಲಯ ಕಟ್ಟಡಕ್ಕೆ ಭೂಮಿಪೂಜೆ ನೆರೆವೇರಿಸಿ ಮಾತನಾಡಿದರು.
ಪಟ್ಟಣ ಪಂಚಾಯತಿ ಅಧ್ಯಕ್ಷೆ ಶಿಲ್ಪಾ ಪಾಲ್ಕರ್, ಉಪ್ಪಾಧ್ಯಕ್ಷ ಗಂಗಾಧರ ಗೌಳಿ, ಮುಖ್ಯಾಧಿಕಾರಿ ಚಂದ್ರಶೇಖರ.ಬಿ, ಸದಸ್ಯರಾದ ಶಕುಂತಲಾ ಬೋಳಾರ, ಕಲ್ಮೇಶ ಬೆಣ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ, ಸುಧೀರ ಬೋಳಾರ, ಬಾಳು ಖಾನಾಪುರ, ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಕಾರ್ಯಪಾಲಕ ಎಂಜಿನಿಯರ್ ಜಿ.ಎನ್ ಗೋನಾಳ, ಕಿರಿಯ ಎಂಜಿನಿಯರ್ ಅಕ್ಕಮಹಾದೇವಿ ತಡಸ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.