ADVERTISEMENT

ಅಕ್ಷರ ಜಾತ್ರೆಯಿಂದ ಕಳೆಗಟ್ಟಿದ ಹಾವೇರಿ: ಕಲಾ ತಂಡಗಳ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2023, 5:58 IST
Last Updated 6 ಜನವರಿ 2023, 5:58 IST
ಕಲಾ ತಂಡಗಳ ಮೆರವಣಿಗೆ
ಕಲಾ ತಂಡಗಳ ಮೆರವಣಿಗೆ   

ಹಾವೇರಿ: ಅಕ್ಷರ ಜಾತ್ರೆಯಿಂದ ಇಡೀ ನಗರ ಕಳೆಗಟ್ಟಿದೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ಹೃದಯ ಭಾಗದಿಂದ ಕಲಾ ತಂಡಗಳ ಮೆರವಣಿಗೆ ಹಾದು ಹೋಗುತ್ತಿದ್ದು, ಎಲ್ಲೆಡೆ ಕನ್ನಡ ಮಾರ್ದನಿಸುತ್ತಿದೆ. ರಸ್ತೆಯುದ್ದಕ್ಕೂ ನಿಂತಿರುವ ಕನ್ನಡಾಭಿಮಾನಿಗಳು ಕಲಾ ತಂಡಗಳ ಮೇಲೆ ಹೂಮಳೆಗರೆದು ಸ್ವಾಗತಿಸುತ್ತಿದ್ದಾರೆ. ಕನ್ನಡಕ್ಕೆ ಜಯವಾಗಲಿ ಎಂದು ಘೋಷಣೆಗಳನ್ನು ಹಾಕುತ್ತಿದ್ದಾರೆ.

ರಸ್ತೆಯುದ್ದಕ್ಕೂ ಕನ್ನಡ ಧ್ವಜಗಳು, ಬ್ಯಾನರ್, ಬಂಟಿಂಗ್ಸ್ ರಾರಾಜಿಸುತ್ತಿವೆ. ವೃತ್ತಗಳನ್ನು ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದೆ.

ಮೆರವಣಿಗೆ ಕಣ್ತುಂಬಿಕೊಳ್ಳಲು ಜನ ಕಟ್ಟಡಗಳ ಮೇಲೇರಿ ಕುಳಿತಿದ್ದಾರೆ. ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಮೆರವಣಿಗೆಯಿಂದ ಇಡೀ ನಗರದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.