ADVERTISEMENT

ಎಂಇಎಸ್‌ ಸಂಘಟನೆ ನಿಷೇಧಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 15:39 IST
Last Updated 2 ಸೆಪ್ಟೆಂಬರ್ 2020, 15:39 IST
ರಾಜ್ಯದಲ್ಲಿ ಎಂಇಎಸ್‌ ಸಂಘಟನೆ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಕರವೇ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಹಾವೇರಿಯಲ್ಲಿ ಚುನಾವಣಾ ತಹಶೀಲ್ದಾರ್‌ಗೆ ಬುಧವಾರ ಮನವಿ ಸಲ್ಲಿಸಿದರು 
ರಾಜ್ಯದಲ್ಲಿ ಎಂಇಎಸ್‌ ಸಂಘಟನೆ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಕರವೇ (ಪ್ರವೀಣಕುಮಾರ ಶೆಟ್ಟಿ ಬಣ) ಕಾರ್ಯಕರ್ತರು ಹಾವೇರಿಯಲ್ಲಿ ಚುನಾವಣಾ ತಹಶೀಲ್ದಾರ್‌ಗೆ ಬುಧವಾರ ಮನವಿ ಸಲ್ಲಿಸಿದರು    

ಹಾವೇರಿ: ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡುವಾಗ ಕನ್ನಡಿಗರ ಮೇಲೆ ಹಾಗೂ ಪೊಲೀಸ್‌ ಇಲಾಖೆಯವರ ಮೇಲೆ ದಾಂದಲೆ ಮಾಡಿದ ಎಂ.ಇ.ಎಸ್ ಸಂಘಟನೆಯನ್ನು ನಮ್ಮ ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಹಾವೇರಿ ತಾಲ್ಲೂಕು ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ದಾಂಧಲೆ ಮಾಡಿದ ಪುಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿ ಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಫಕ್ಕೀರೇಶ ಕಟ್ಟಿಮನಿ, ಜಿಲ್ಲಾ ಕಾರ್ಯಾಧ್ಯಕ್ಷ ನೂರ್‌ ಅಹಮದ್ ಲಕ್ಷ್ಮೇಶ್ವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಹಾಲಗಿ, ಮಹದೇವಪ್ಪ ಹೆಡಿಗ್ಗೊಂಡ, ಅನಸೂಯಾ ಸಿದ್ದಪ್ಪಳವರ, ಕೃಷ್ಟಪ್ಪ ನಾಗಜ್ಜಿ, ಹನಮಂತ ಭೋವಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.