ADVERTISEMENT

ಹಿಂದೂ ಯುವತಿಯರ ಹಂತಕರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಬರಲಿ: ಈಶ್ವರಪ್ಪ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2025, 8:09 IST
Last Updated 18 ಮಾರ್ಚ್ 2025, 8:09 IST
<div class="paragraphs"><p>ಕೆ.ಎಸ್. ಈಶ್ವರಪ್ಪ</p></div>

ಕೆ.ಎಸ್. ಈಶ್ವರಪ್ಪ

   

ಹಾವೇರಿ: 'ಸ್ವಾತಿ ಬ್ಯಾಡಗಿ ಅವರ ಹತ್ಯೆ ಖಂಡನೀಯ. ಈ ರೀತಿ ಹಿಂದೂ ಯುವತಿಯರನ್ನು ಕೊಲ್ಲುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಯಾಗಬೇಕು' ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.

ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರಿನಲ್ಲಿರುವ ಸ್ವಾತಿ ಮನೆಗೆ ಭೇಟಿ‌ ನೀಡಿದ ಅವರು ಕುಟುಂಬದವರಿಗೆ ಸಾಂತ್ವನ ಹೇಳಿದರು.

ADVERTISEMENT

ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಸ್ವಾತಿ ಅವರ ತಾಯಿ ಅಂಗನವಾಡಿಯಲ್ಲಿ‌ ಅಡುಗೆ ಮಾಡಿ ಜೀವನ ನಡೆಸುತ್ತಿದ್ದಾರೆ. ಅವರ ಬಡತನದ ಕಥೆ ಕೇಳಿ ಕಣ್ಣೀರು ಬಂತು' ಎಂದರು.

'ಸ್ವಾತಿ ಹತ್ಯೆಯಾಗಿ 16 ದಿನವಾದರೂ ಉಸ್ತುವಾರಿ ಸಚಿವರು ಮನೆಗೆ ಭೇಟಿ‌ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ. ಅದೇ ಮುಸ್ಲಿಂ ಯುವತಿ ಆಗಿದ್ದರೆ ಇಡೀ ಸರ್ಕಾರವೇ ಅವರ ಮನೆಯಲ್ಲಿರುತ್ತಿತ್ತು. ಈ ರಾಜ್ಯ ಸರ್ಕಾರ, ಮುಸ್ಲಿಂರನ್ನು ಓಲೈಸುವ ಕೆಲಸ ಮಾಡುತ್ತಿದೆ. ಅವರ ಗುಲಾಮಗಿರಿ ಮಾಡುತ್ತಿದೆ' ಎಂದರು.

'ಸ್ವಾತಿ ಬ್ಯಾಡಗಿ ಅವರ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ‌ ಮಲಗಿದ್ದಾರೆ. ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ಇದುವರೆಗೂ ವರದಿ ನೀಡಿಲ್ಲ. ಇಂಥ ಬೇಜವಾಬ್ದಾರಿಯಾಗಿ ವರ್ತಿಸಿರುವ‌ ಅಧಿಕಾರಿಗಳ‌ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.