ADVERTISEMENT

ಬ್ಯಾಡಗಿಯಲ್ಲಿ ನಟ ದರ್ಶನ್: ಅಭಿಮಾನಿಗಳಿಗೆ ಲಾಠಿ ರುಚಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 19:46 IST
Last Updated 21 ಜುಲೈ 2021, 19:46 IST

ಬ್ಯಾಡಗಿ: ಇಲ್ಲಿಯ ಮೆಣಸಿನಕಾಯಿ ಉದ್ಯಮಿ ಹಾಗೂ ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ ಅವರ ಅತಿಥಿಗೃಹದಲ್ಲಿ ಕಳೆದ ಎರಡು ದಿನಗಳಿಂದ ತಂಗಿದ್ದ ಚಿತ್ರನಟ ದರ್ಶನ್ ಅವರನ್ನು ನೋಡಲು ಬುಧವಾರ ಜಮಾಯಿಸಿದ್ದ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟರು.

ದರ್ಶನ ಅವರೊಂದಿಗೆ ಫೋಟೊ ತೆಗೆಸಿಕೊಳ್ಳಲು ಜನರು ಮುಗಿಬಿದ್ದಿದ್ದ ರಿಂದ ಪೊಲೀಸರು ಅವರತ್ತ ಲಾಠಿ ಬೀಸಿದರು. ಬೆಳಿಗ್ಗೆ ಉಪಾಹಾರಕ್ಕಾಗಿ ಮಾಜಿ ಶಾಸಕರ ಪುತ್ರ ಹಾಗೂ ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಬಾಲಚಂದ್ರ ಪಾಟೀಲ ಅವರ ನಿವಾಸಕ್ಕೆ ತೆರಳುವಾಗ ನೂಕು ನುಗ್ಗಲು ಉಂಟಾಯಿತು.

ಈ ಸಂದರ್ಭದಲ್ಲಿ ಚಿತ್ರ ನಟ ದರ್ಶನ್ ಮಾಧ್ಯಮ ಪ್ರತಿನಿಧಿಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.