ADVERTISEMENT

ಹಾವೇರಿ ಜೆಡಿಎಸ್‌: ಮಲ್ಲಿಕಾರ್ಜುನ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 2:33 IST
Last Updated 20 ಸೆಪ್ಟೆಂಬರ್ 2020, 2:33 IST

ಹುಬ್ಬಳ್ಳಿ: ಜೆಡಿಎಸ್‌ನ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ರುದ್ರಪ್ಪ ಹಲಗೇರಿ ಅವರನ್ನು ನೇಮಕ ಮಾಡಲಾಗಿದೆ. ಹಿಂದಿನ ಅಧ್ಯಕ್ಷರಾಗಿದ್ದ ಅಶೋಕ ಬೇವಿನಮರದ ಅನಾರೋಗ್ಯ ಕಾರಣದಿಂದ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಹುಬ್ಬಳ್ಳಿ ಸಮೀಪದ ಛಬ್ಬಿ ಕ್ರಾಸ್‍ನಲ್ಲಿರುವ ಬಸವರಾಜ ಹೊರಟ್ಟಿ ಅವರ ನಿಸರ್ಗ ಫಾರ್ಮ್‌ ಹೌಸ್‌ನಲ್ಲಿ ಶನಿವಾರ ಹೊರಟ್ಟಿ ಅವರು ಮಲ್ಲಿಕಾರ್ಜುನ ಅವರಿಗೆ ಆದೇಶ ಪತ್ರ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಹೊರಟ್ಟಿ ‘ಎಚ್‌.ಡಿ. ದೇವೇಗೌಡರು ಮತ್ತು ಕುಮಾರಸ್ವಾಮಿ ಸೂಚನೆ ಮೇರೆಗೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟಗಳ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಲಾಗಿದೆ. ಗ್ರಾಮಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು. ಗ್ರಾಮ ಪಂಚಾಯ್ತಿ ಚುನಾವಣೆ ಎದುರಿಸಲು ಈಗಿನಿಂದಲೇ ಸಿದ್ಧತೆ ನಡೆಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT