ADVERTISEMENT

ನದಿಯಲ್ಲಿ ಕೊಚ್ಚಿಹೋದ ಯುವಕನ ರಕ್ಷಣೆಗೆ ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2019, 6:36 IST
Last Updated 24 ಅಕ್ಟೋಬರ್ 2019, 6:36 IST
   

ಹಾವೇರಿ: ಎತ್ತಿನ ಮೈ ತೊಳೆಯುವಾಗ ಪ್ರಶಾಂತ್ ಸೋಮಪ್ಪ ಕೊಂಚಿಗೇರಿ (18) ಎಂಬ ಯುವಕ ವರದಾ ನದಿಯಲ್ಲಿ ಕೊಚ್ಚಿ ಹೋಗಿದ್ದು, ಆತನ ರಕ್ಷಣೆಗೆ ಮುಂದಾದ ಪರಮೇಶಪ್ಪ ಕಮ್ಮಾರ (62) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

‌ಹಾವೇರಿ ಜಿಲ್ಲೆಯ ಹಂದಿಗನೂರು ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಈ ದುರಂತ ಸಂಭವಿಸಿದೆ. ಪ್ರಶಾಂತ್ ಎತ್ತುಗಳನ್ನು ತೊಳೆಯಲು 7.30ರ ಸುಮಾರಿಗೆ ನದಿ ಬಳಿ ತೆರಳಿದ್ದ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದ ಆತನನ್ನು, ಎತ್ತುಗಳನ್ನು ತೊಳೆಯುತ್ತಿದ್ದ ಪರಮೇಶಪ್ಪ ಹಿಡಿದುಕೊಳ್ಳಲು ಮುಂದಾಗಿ ಅವರೂ ಅಪಾಯಕ್ಕೆ ಸಿಲುಕಿದರು.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್ ತಂಡ ಕಾರ್ಯಾಚರಣೆ ಪ್ರಾರಂಭಿಸಿದ್ದು, 10.30ರ ಸುಮಾರಿಗೆ ಪರಮೇಶಪ್ಪ ಅವರ ದೇಹವನ್ನು ಹೊರತೆಗೆದಿದ್ದಾರೆ. ಪ್ರಶಾಂತ್‌ಗಾಗಿ ಶೋಧ ಮುಂದುವರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.