ಹಾವೇರಿ: ಕೋವಿಡ್–19 ಎರಡನೇ ಅಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್, ಉಪ ವಿಭಾಗ ಹಾಗೂ ಶಹರ ಪೊಲೀಸ್ ಠಾಣೆ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ‘ಮಾಸ್ಕ್ ಜಾಗೃತಿ ಜಾಥಾ’ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಚಾಲನೆ ನೀಡಿದರು.
ನಗರದ ಹೊಸಮನಿ ಸಿದ್ದಪ್ಪ ವೃತ್ತದಿಂದ ಆರಂಭವಾದ ಜಾಥಾ ಮೈಲಾರ ಮಹದೇವಪ್ಪ ವೃತ್ತ, ಗಾಂಧಿ ವೃತ್ತ, ಎಂ.ಜಿ.ರಸ್ತೆ, ಮೇಲಿನಪೇಟೆ, ಸುಭಾಸ್ ವೃತ್ತ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಸಾರ್ವಜನಿಕರಿಗೆ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಮಾಸ್ಕ್ ಧಾರಣೆ ಕುರಿತು ಜಾಗೃತಿ ಮೂಡಿಸಲಾಯಿತು.
ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಯಿತು ಹಾಗೂ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು. ಹೆಚ್ಚುವರಿ ಎಸ್ಪಿ ವಿಜಯಕುಮಾರ ಸಂತೋಷ್, ಡಿ.ವೈ.ಎಸ್.ಪಿ. ಶಂಕರ ಮಾರಿಹಾಳ, ಶಹರ ಪೊಲೀಸ್ ಠಾಣೆ ಸಿಪಿಐ ಪ್ರಹ್ಲಾದ ಚನ್ನಗಿರಿ, ಸಂಚಾರಿ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಬಿ.ಎ. ಬೆಟಗೇರಿ ಹಾಗೂ ಜಿ.ಬಿ.ನಾವಿ, ಆರ್.ಪಿ.ಐ ಮಾರುತಿ ಹೆಗಡೆ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ತಹಶೀಲ್ದಾರ್ ಗಿರೀಶ ಸ್ವಾದಿ, ನಗರಸಭೆ ಪೌರಾಯುಕ್ತ ಪರಶುರಾಮ ಚಲವಾದಿ ಜಾಥಾದಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.