ADVERTISEMENT

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ತಲೆಗೆ ತಾಗಿದ ವೈದ್ಯರ ಕತ್ತರಿ!

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 13:20 IST
Last Updated 26 ಡಿಸೆಂಬರ್ 2025, 13:20 IST
<div class="paragraphs"><p>ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ತಲೆಗೆ ತಾಗಿದ ವೈದ್ಯರ ಕತ್ತರಿ!</p></div>

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ತಲೆಗೆ ತಾಗಿದ ವೈದ್ಯರ ಕತ್ತರಿ!

   

ಹಾವೇರಿ: ಇಲ್ಲಿಯ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡುವ ಸಂದರ್ಭದಲ್ಲಿ ಶಿಶುವಿನ ತಲೆಗೆ ಕತ್ತರಿ ತಾಗಿ ಗಾಯವಾಗಿದ್ದು, ‘ವೈದ್ಯರ ನಿರ್ಲಕ್ಷ್ಯವೇ ಘಟನೆಗ ಕಾರಣ’ ಎಂದು ಪೋಷಕರು ಆರೋಪಿಸುತ್ತಿದ್ದಾರೆ.

ಸ್ಥಳೀಯ ನಿವಾಸಿ ಮೊಹಮ್ಮದ್ ಮುಜಾಹಿದ್ ಎಂಬುವವರ ಪತ್ನಿ ಬೇಬಿ ಅಸ್ಪಾ ಗರ್ಭಿಣಿಯಾಗಿದ್ದರು. ಹೆರಿಗೆ ನೋವು ಹೆಚ್ಚಾಗಿದ್ದರಿಂದ ಆಸ್ಪತ್ರೆಗೆ ಬಂದಿದ್ದರು. ಶುಕ್ರವಾರ ಸೀಸೇರಿಯನ್ ಮಾಡುವುದಾಗಿ ಹೇಳಿದ್ದ ಡಾ. ಸ್ವಾತಿ ಹಾಗೂ ತಂಡದವರು, ಶಸ್ತ್ರಚಿಕಿತ್ಸೆ ಕೊಠಡಿಗೆ ಕರೆದೊಯ್ದಿದ್ದರು.

ADVERTISEMENT

ಸಿಸೇರಿಯನ್ ಮುಗಿಯುತ್ತಿದ್ದಂತೆ ಶಿಶುವಿನ ಬಗ್ಗೆ ಪೋಷಕರಿಗೆ ಮಾಹಿತಿ ತಿಳಿಸಿದ್ದ ವೈದ್ಯರು, ‘ಸಿಸೇರಿಯನ್ ಮಾಡುವ ಸಂದರ್ಭದಲ್ಲಿ ಹೊಟ್ಟೆಯಲ್ಲಿದ್ದ ಮಗುವನ್ನು ಹೊರಗೆ ತೆಗೆಯಲು ಸಾಕಷ್ಟು ಕಷ್ಟವಾಯಿತು. ಇದೇ ಸಂದರ್ಭದಲ್ಲಿ ತಲೆಗೆ ಕತ್ತರಿ ತಾಗಿದೆ. ಎರಡು ಹೊಲಿಗೆ ಹಾಕಿದ್ದೇವೆ’ ಎಂದಿದ್ದರು. ವೈದ್ಯರ ಮಾತು ಕೇಳಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

ತಲೆಗೆ ಹೊಲಿಗೆ ಹಾಕಿದ ಸ್ಥಿತಿಯಲ್ಲಿಯೇ ಶಿಶುವನ್ನು ಶಸ್ತ್ರಚಿಕಿತ್ಸೆ ಕೊಠಡಿಯಿಂದ ಹೊರಗೆ ತಂದ ವೈದ್ಯರು, ಪೋಷಕರಿಗೆ ನೀಡಿದರು. ಶಿಶುವನ್ನು ನೋಡಿ ಪೋಷಕರು ಕಣ್ಣೀರಿಟ್ಟರು. ‘ಆಸ್ಪತ್ರೆಯಲ್ಲಿ ನಿತ್ಯವೂ ಹೇರಿಗೆ ಆಗುತ್ತವೆ. ಆದರೆ, ನಮ್ಮ ಮಗುವಿನ ವಿಷಯದಲ್ಲಿ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಾರೆ. ಅವರ ನಿರ್ಲಕ್ಷ್ಯದಿಂದಲೇ ಮಗುವಿನ ತಲೆಗೆ ಗಾಯವಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಘಟನೆ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕರು ಲಭ್ಯರಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.