ADVERTISEMENT

‘ಮಧ್ಯಂತರ ಚುನಾವಣೆ ಕನಸು’

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 19:23 IST
Last Updated 5 ಸೆಪ್ಟೆಂಬರ್ 2019, 19:23 IST

ಹಾವೇರಿ: ‘ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಮಧ್ಯಂತರ ಚುನಾವಣೆಯ ಕನಸು ಕಾಣುತ್ತಿದ್ದಾರೆ. ಪಾಪ, ಅವರ ಪರಿಸ್ಥಿತಿಯೂ ಹಾಗೆಯೇ ಇದೆ. ಎಲ್ಲದಕ್ಕೂ ಮಧ್ಯಂತರ ಎನ್ನುವ ಅವರು ಅದೇ ಗುಂಗಿನಲ್ಲಿ ಮುಳುಗಿದ್ದಾರೆ’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಕುಟುಕಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಪೂರ್ಣ ಅವಧಿಯ ಆಡಳಿತ ನೀಡಲಿದೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನದ ವಿಚಾರದಲ್ಲಿ ಬಿಜೆಪಿಯ ಪಾತ್ರವಿಲ್ಲ’ ಎಂದರು.

‘ಶಿವಕುಮಾರ್ ಬಂಧನದಿಂದ ಕೆಲವು ಕಡೆ ಪರಿಸ್ಥಿತಿ ಬಿಗಡಾಯಿಸಿತ್ತು. ರಾಮನಗರ ಹಾಗೂ ಕನಕಪುರದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.