ಸವಣೂರು: ಶಾಸಕ ಬಸವರಾಜ ಬೊಮ್ಮಾಯಿ ಆ. 25 ರಂದು ಪಟ್ಟಣ ಸೇರಿದಂತೆ ತಾಲ್ಲೂಕಿನ ತೊಂಡೂರ ಹಾಗೂ ಚಿಕ್ಕಬೂದಿಹಾಳ ಗ್ರಾಮಗಳಲ್ಲಿ ಜರುಗುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಪಟ್ಟಣದ ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಾಹ್ನ 12 ಗಂಟೆಗೆ ಏರ್ಪಡಿಸಿರುವ ವಿದ್ಯಾರ್ಥಿಗಳ ಸ್ವಾಗತ, ಕಾಲೇಜು ಸಂಸತ್ ಉದ್ಘಾಟನೆ ಸಮಾರಂಭ, ಮದ್ಯಾಹ್ನ 1 ಗಂಟೆಗೆ ತಾಲ್ಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ಏರ್ಪಡಿಸಿರುವ ಹೊನ್ನಮ್ಮದೇವಿ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಕಳಸಾರೋಹಣ ಹಾಗೂ ಮ. 2.30ಕ್ಕೆ ತಾಲ್ಲೂಕಿನ ತೊಂಡೂರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಏರ್ಪಡಿಸಿರುವ ಹಾಲು ಶಿಥಲೀಕರಣ ಘಟಕ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.