ADVERTISEMENT

ಸಚಿವ ಸ್ಥಾನ ಸಿಗದಿರುವುದು ನೋವುಂಟು ಮಾಡಿದೆ: ಶಾಸಕ ಶಿವಣ್ಣವರ

​ಪ್ರಜಾವಾಣಿ ವಾರ್ತೆ
Published 3 ಜೂನ್ 2023, 13:05 IST
Last Updated 3 ಜೂನ್ 2023, 13:05 IST
ಬಸವರಾಜ ಶಿವಣ್ಣನವರ
ಬಸವರಾಜ ಶಿವಣ್ಣನವರ   

ರಾಣೆಬೆನ್ನೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಹಾವೇರಿ ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನ ಸಿಗದಿರುವುದು ಬಹಳಷ್ಟು ನೋವುಂಟು ಮಾಡಿದೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ ಸುಣಕಲ್ಲಬಿದರಿ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕೊನೆಯ ಹಂತದವರೆಗೂ ನನಗಾಗಲಿ ಅಥವಾ ರುದ್ರಪ್ಪ ಲಮಾಣಿ ಅವರಿಗಾಗಲಿ ಸಚಿವ ಸ್ಥಾನ ದೊರೆಯುತ್ತದೆ ಎಂಬ ಆಶಾಭಾವನೆ ಇತ್ತು. ಆದರೆ ಅದು ನಿರಾಸೆಯಾಗಿದ್ದು, ಜಿಲ್ಲೆಯ ಜನರಿಗೂ ನೋವಾಗಿದೆ ಎಂದರು.

ಈ ಹಿಂದೆಯೂ ಕಾಂಗ್ರೆಸ್ ಆಡಳಿತದಲ್ಲಿ ಹಾವೇರಿ ಜಿಲ್ಲೆಗೆ ಸಚಿವ ಸ್ಥಾನ ದೊರೆತಿರಲಿಲ್ಲ. ನನಗೆ ಸಚಿವ ಸ್ಥಾನ ದೊರೆಯದಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಮಾನಗಳಲ್ಲಿ ಹಾವೇರಿ ಜಿಲ್ಲೆಗೆ ಸಚಿವ ಸ್ಥಾನ ದೊರೆಯುತ್ತದೆ ಎಂಬ ಭರವಸೆ ನನಗಿದೆ ಎಂದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.