ADVERTISEMENT

ಹಾವೇರಿ: ಆನ್‌ಲೈನ್‌ ಭಿತ್ತಿಪತ್ರ ಚಳವಳಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 14:36 IST
Last Updated 10 ಜುಲೈ 2020, 14:36 IST
ಆನ್‌ಲೈನ್‌ ಭಿತ್ತಿಪತ್ರ ಚಳವಳಿಯಲ್ಲಿ ಪಾಲ್ಗೊಂಡ ಅತಿಥಿ ಉಪನ್ಯಾಸಕ 
ಆನ್‌ಲೈನ್‌ ಭಿತ್ತಿಪತ್ರ ಚಳವಳಿಯಲ್ಲಿ ಪಾಲ್ಗೊಂಡ ಅತಿಥಿ ಉಪನ್ಯಾಸಕ    

ಹಾವೇರಿ:ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಬಾಕಿ ಉಳಿದಿರುವ ವೇತನವನ್ನು ಒಂದೇ ಬಾರಿಗೆ ಪಾವತಿಸಬೇಕು ಮತ್ತು ಕೊರೊನಾ ಹಿನ್ನೆಲೆಯಲ್ಲಿ ‘ಪರಿಹಾರ ಪ್ಯಾಕೇಜ್’ ಘೋಷಿಸಬೇಕು ಎಂದು ನಗರದಲ್ಲಿ ಶುಕ್ರವಾರ ಜಿಲ್ಲೆಯಾದ್ಯಂತ ರಾಜ್ಯ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರ ಹೋರಾಟ ಸಮಿತಿ ವತಿಯಿಂದ‘ಆನ್‌ಲೈನ್‌ ಭಿತ್ತಿಪತ್ರ ಚಳವಳಿ’ ನಡೆಯಿತು.

ಸೇವಾ ಭದ್ರತೆ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಭಿತ್ತಿಪತ್ರಗಳೊಂದಿಗೆ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುವ ಮೂಲಕ ಚಳವಳಿಯಲ್ಲಿ ಪಾಲ್ಗೊಂಡರು.

‘ನಮ್ಮ ರಾಜ್ಯದಲ್ಲಿ ಈಗಾಗಲೇ 8 ಅತಿಥಿ ಉಪನ್ಯಾಸಕರು ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಎಷ್ಟೋ ಜನ ಶಿಕ್ಷಕರು ಮತ್ತು ಉಪನ್ಯಾಸಕರು ಹೇಳಿಕೊಳ್ಳಲಾಗದ ನೋವನ್ನು ಒಳಗೊಳಗೇ ಅನುಭವಿಸುತ್ತಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದ ಕುಗ್ಗಿ ಹೋಗಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT

ಆನ್ಲೈನ್ ಚಳವಳಿಯಲ್ಲಿ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಕಾಲೇಜುಗಳ, ಶಾಲೆಗಳ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.