ಹಾವೇರಿ: ಇಲ್ಲಿಯ ಹಾವೇರಿ ತಾಲ್ಲೂಕು ಶ್ರೀ ಕನಕ ನೌಕರರ ಸಂಘದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2024–25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ಹಾವೇರಿ ತಾಲ್ಲೂಕಿನಲ್ಲಿರುವ ಕುರುಬ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ಆಧಾರ್, ಪಡಿತರ ಚೀಟಿ ಸಮೇತ ಸ್ವ–ವಿವರವನ್ನು ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.
ಅರ್ಹ ವಿದ್ಯಾರ್ಥಿಗಳು ತಮ್ಮ ಸ್ವ–ವಿವರವನ್ನು ದಾಖಲೆ ಸಮೇತವಾಗಿ ಎಲ್.ಟಿ. ಕೆಂಚಣ್ಣನವರ, ಬೀರಲಿಂಗೇಶ್ವರ ನಿಲಯ, 1ನೇ ಕ್ರಾಸ್, ನಂದಿ ಲೇಔಟ್, ಡಿ.ಸಿ. ಕಚೇರಿ ರಸ್ತೆ, ಇಜಾರಿಲಕಮಾಪುರ, ಹಾವೇರಿ–581110 ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಸೆ. 30 ಕೊನೆ ದಿನವಾಗಿದೆ. ಮಾಹಿತಿಗಾಗಿ: ಮೊ: 91648 92705, 94494 43055 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.