ಅಕ್ಕಿಆಲೂರ (ಹಾವೇರಿ ಜಿಲ್ಲೆ): ಗ್ರಾಮೀಣ ಜನರಿಗೆ ರಕ್ತದಾನ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಇಲ್ಲಿನ ‘ಸ್ನೇಹಮೈತ್ರಿ ಬ್ಲಡ್ ಆರ್ಮಿ’ಯು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾನಗಲ್ ಘಟಕದ ಸಹಕಾರದಲ್ಲಿ ನಿರ್ಮಿಸಿರುವ ‘ರಕ್ತದಾನ ರಥ’ (ಬಸ್) ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆಯಾಗಿದೆ.
ರಕ್ತದಾನ ರಥ ನಿರ್ಮಾಣಕ್ಕಾಗಿ ಸ್ನೇಹಮೈತ್ರಿ ಬ್ಲಡ್ ಆರ್ಮಿಯಕರಬಸಪ್ಪ ಗೊಂದಿ ಅವರಿಗೆ ಪ್ರಶಸ್ತಿಪತ್ರ ಮತ್ತು ಫಲಕ ನೀಡಿ ಗೌರವಿಸಲಾಗಿದೆ.
ಪ್ರತಿದಿನ ಹಾನಗಲ್ನಿಂದ ಅಕ್ಕಿಆಲೂರು ಮಾರ್ಗವಾಗಿ ಹಾವೇರಿಗೆ ಸಂಚರಿಸುವ ಈ ಬಸ್ ಅನೇಕ ಹಳ್ಳಿಗಳಿಗೆ ಸಂಚರಿಸಿ, ಗ್ರಾಮೀಣರಲ್ಲಿ ರಕ್ತದಾನ ಕುರಿತು ಒಂದು ವರ್ಷದಿಂದ ಅರಿವು ಮೂಡಿಸುತ್ತಿದೆ. ಇದರಿಂದ ಸಾಕಷ್ಟು ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.