ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಶ್ರೀಕಾಂತ ಜಡೇಕರನಿಗೆ 10 ವರ್ಷಗಳ ಕಠಿಣ ಸಜೆ ಹಾಗೂ ₹15 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಸೆಷೆನ್ಸ್ ಎಫ್.ಟಿ.ಎಸ್.ಸಿ-1 (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್. ಜ್ಯೋತಿಶ್ರೀ ತೀರ್ಪು ನೀಡಿದ್ದಾರೆ.
ಬಾಲಕಿಯನ್ನು ಮದುವೆಯಾಗುವುದಾಗಿ ಮಾರ್ಚ್-2015ರಲ್ಲಿ ಅಪಹರಿಸಿಕೊಂಡು ಹೋಗಿ, ತಾಳಿಕಟ್ಟಿ ಒತ್ತಾಯದಿಂದ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹಿರೇಕೆರೂರಿನ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಟಿ. ಯೋಗೀಶ ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿತನ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ಅವರು ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.