ADVERTISEMENT

ಹಾಸ್ಟೆಲ್‌ ತೆರೆಯಲು ಮನವಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 13:37 IST
Last Updated 26 ಜುಲೈ 2021, 13:37 IST
ವಿವಿಧ ಬೇಡಿಕೆ ಈಡೇರಿಸಲು ಎಬಿವಿಪಿ ಪದಾಧಿಕಾರಿಗಳು ಸೋಮವಾರ ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಮನವಿ ಸಲ್ಲಿಸಿದರು 
ವಿವಿಧ ಬೇಡಿಕೆ ಈಡೇರಿಸಲು ಎಬಿವಿಪಿ ಪದಾಧಿಕಾರಿಗಳು ಸೋಮವಾರ ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಮನವಿ ಸಲ್ಲಿಸಿದರು    

ಹಾವೇರಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ,ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾವೇರಿ ಶಾಖೆ ವತಿಯಿಂದ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರಿಗೆ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬಿಡುಗಡೆ ಮಾಡಬೇಕು, ಮುಚ್ಚಿರುವ ಹಾಸ್ಟೆಲ್‌ಗಳನ್ನು ಶೀಘ್ರ ತೆರೆದು ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಬೇಕು ಎಂದು ಎಬಿವಿಪಿ ಮುಖಂಡರು ಮನವಿ ಮಾಡಿದರು.

ಜಿಲ್ಲಾ ಸಂಚಾಲಕರಾದ ಗಂಗಾಧರ ಕುಲಕರ್ಣಿ, ಪ್ರಸನ್ನ ಕೋರಿ, ಲಿಂಗರಾಜ್, ಅರುಣ್ ಕಾಟೆ ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.