ADVERTISEMENT

ಜನರ ಸೇವೆಗಾಗಿ ಕ್ಷೇತ್ರವನ್ನೇ ತ್ಯಾಗ ಮಾಡುತ್ತೇನೆ: ಶಾಸಕ ಜಮೀರ್‌ ಅಹಮದ್‌

ಶಾಸಕ ಜಮೀರ್‌ ಅಹಮದ್‌ ಖಾನ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2022, 15:47 IST
Last Updated 14 ಫೆಬ್ರುವರಿ 2022, 15:47 IST
ಜಮೀರ್‌ ಅಹಮದ್‌ ಖಾನ್‌
ಜಮೀರ್‌ ಅಹಮದ್‌ ಖಾನ್‌   

ಹಾವೇರಿ:‘ರಾಜ್ಯದಾದ್ಯಂತ ನಾನು ಪ್ರವಾಸ ಮಾಡಿದ್ದೇನೆ.ರಾಜ್ಯದಲ್ಲಿ ಸಿದ್ದರಾಮಯ್ಯ ಪರವಾದ ಒಲವಿದ್ದು, ಜನರ ಸೇವೆಗಾಗಿ ಚಾಮರಾಜಪೇಟೆ ಕ್ಷೇತ್ರವನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಡುತ್ತಿದ್ದೇನೆ’ ಎಂದು ಶಾಸಕ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

ಶಿಗ್ಗಾವಿ ತಾಲ್ಲೂಕಿನ ಹುಲಗೂರು ಗ್ರಾಮದಖಾದ್ರಿ ದರ್ಗಾಕ್ಕೆಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ’ನಾನು ಶಾಸಕನಾಗುವುದಕ್ಕಿಂತ ನನಗೆ ರಾಜ್ಯದ ಜನರ ಹಿತ ಮುಖ್ಯ.ನನಗೆ ಯಾವ ಕ್ಷೇತ್ರವೂ ಬೇಡ. ರಾಜ್ಯಕ್ಕೆ ಮತ್ತು ಸಿದ್ದರಾಮಯ್ಯಗೆ ಒಳ್ಳೆಯದಾದರೆ ಸಾಕು ಎಂದು ನನ್ನ ಕ್ಷೇತ್ರವನ್ನು ತ್ಯಾಗ ಮಾಡುತ್ತಿದ್ದೇನೆ’ ಎಂದರು.

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ತಲೆಯ ರಕ್ಷಣೆಗೆ ಹೆಲ್ಮೆಟ್‌ ಹಾಕಿದಂತೆ, ಹಿಜಾಬ್ ಹಾಕೋದು ಹೆಣ್ಣುಮಕ್ಕಳ ರಕ್ಷಣೆಗಾಗಿ. ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿಸಿ ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ವಿಷಬೀಜ ಬಿತ್ತುತ್ತಿದ್ದಾರೆ. ಬಿಜೆಪಿಯವರಿಗೆ ಹೇಳಿಕೊಳ್ಳಲು ಅಭಿವೃದ್ಧಿ ವಿಚಾರಗಳಿಲ್ಲ. ಚುನಾವಣೆ ಸಮೀಪಿಸುತ್ತಿರುವುದರಿಂದ ಇಂಥ ವಿವಾದ ಸೃಷ್ಟಿಸುತ್ತಾರೆ. ರಾಜ್ಯದ ಜನರು ದಡ್ಡರಲ್ಲ. 2023ರ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.