ADVERTISEMENT

ಜಿಲ್ಲಾ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 4:08 IST
Last Updated 18 ಫೆಬ್ರುವರಿ 2021, 4:08 IST
ಹಾವೇರಿ ನಗರದ ವೇದಾಂತ (ಪರಿವರ್ತನಾ) ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಸಾಂಸ್ಕೃತಿಕ ಹಾಗೂ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಹಾವೇರಿ ನಗರದ ವೇದಾಂತ (ಪರಿವರ್ತನಾ) ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಸಾಂಸ್ಕೃತಿಕ ಹಾಗೂ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ   

ಹಾವೇರಿ:ನಗರದ ವೇದಾಂತ (ಪರಿವರ್ತನಾ) ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಜಿ.ಎಚ್‌. ಕಾಲೇಜಿನಲ್ಲಿ ಈಚೆಗೆ ನಡೆದ ತಾಲ್ಲೂಕು ಮಟ್ಟದ ಸಾಂಸ್ಕೃತಿಕಹಾಗೂ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಿತ್ರಕಲೆ ಸ್ಫರ್ಧೆಯಲ್ಲಿ ನಿಶಾಂತ ಬಳಿಗೇರ ಪ್ರಥಮ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸಮೀರ್‌ ಜಾತಗೇರ ಪ್ರಥಮ, ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಗಂಗಾಧರ ಕಾಯಕದ ಪ್ರಥಮ, ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಸುರೇಖಾ ಪಾಟೀಲ ತೃತೀಯ ಸ್ಥಾನ ಗಳಿಸಿದ್ದಾರೆ ಎಂದುಪ್ರಾಚಾರ್ಯ ಕೆ.ಜಿ.ಪಾಟೀಲ ಪ್ರಕಟಣೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT