ಶಿಗ್ಗಾವಿ: ತಾಲ್ಲೂಕಿನ ಬಂಕಾಪುರ ಪಟ್ಟಣದ ಪೇಟೆ ಮುಖ್ಯರಸ್ತೆಯಲ್ಲಿ ಶನಿವಾರ ಎರಡು ಮನೆಗಳ ಬೀಗ ಮುರಿದು ಕಳವು ಮಾಡಲಾಗಿದೆ.
ಪುರಸಭೆ ಸದಸ್ಯ ರಾಜೇಂದ್ರ ಟೊಪಣ್ಣವರ ಮನೆಯಲ್ಲಿ ₹1.10 ಲಕ್ಷ ನಗದು, ಎರಡು ಕೈಗಡಿಯಾರ, ಗಿರಿಜವ್ವ ಅರಳಿಕಟ್ಟಿ ಅವರ ಮನೆಯಲ್ಲಿ ₹1 ಸಾವಿರ ನಗದು ಕಳವು ಮಾಡಿದ ಕಳ್ಳರು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಬಂಕಾಪುರ ಪೊಲೀಸ್ ಠಾಣೆಯ ಸಿಬ್ಬಂದಿ, ಶ್ವಾನದಳ ಮತ್ತು ಬೆರಳಚ್ಚುಗಾರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.