ADVERTISEMENT

ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಿವಾನಂದ ಗುರುಮಠ ನಿಧನ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 14:53 IST
Last Updated 10 ಅಕ್ಟೋಬರ್ 2021, 14:53 IST
ಶಿವಾನಂದ ಗುರುಮಠ
ಶಿವಾನಂದ ಗುರುಮಠ   

ಹಾವೇರಿ: ತಾಲ್ಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ, ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ಗುರುಮಠ (74) ಭಾನುವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

ಪ್ರಗತಿಪರ ಕೃಷಿಕರಾಗಿದ್ದ ಶಿವಾನಂದ ಗುರುಮಠ ಅವರು ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಅವರ ಒಡನಾಡಿಯಾಗಿದ್ದರು. ರಾಜ್ಯ ರೈತ ಸಂಘದ ಸಂಸ್ಥಾಪಕ ಸದಸ್ಯರಲ್ಲೊಬ್ಬರು.ಸಂಗೂರಿನ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರರ ಹಾಗೂ ಕಾರ್ಖಾನೆಯ ಕಾರ್ಮಿಕರ ಹಕ್ಕುಗಳಿಗೆ ಹಲವಾರು ಹೋರಾಟಗಳನ್ನು ನಡೆಸಿದ್ದರು.

ADVERTISEMENT

ಎಂ.ಎಸ್ಸಿ ಪದವೀಧರರಾಗಿದ್ದ ಗುರುಮಠ ಅವರು ಕೆಲಕಾಲ ಉಪನ್ಯಾಸಕರಾಗಿಯೂ ಕಾರ್ಯನಿರ್ವಹಿಸಿದ್ದರು. ರೈತರಿಗೆ ಆಗುವ ಅನ್ಯಾಯ, ಶೋಷಣೆ ವಿರುದ್ಧ ಧ್ವನಿ ಎತ್ತುತ್ತಾ, ಇಳಿವಯಸ್ಸಿನಲ್ಲೂ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.