ADVERTISEMENT

ಜನವರಿ 20ಕ್ಕೆ ರಾಜ್ಯಪಾಲರ ನಿವಾಸಕ್ಕೆ ಕಾಂಗ್ರೆಸ್‌ ಮುತ್ತಿಗೆ 

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 10:21 IST
Last Updated 15 ಜನವರಿ 2021, 10:21 IST
ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ
ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ    

ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಹಾಗೂ ಅವರಿಗೆ ಆತ್ಮ ಸ್ಥೈರ್ಯ ತುಂಬುವ ಉದ್ದೇಶದಿಂದ ಕೆಪಿಸಿಸಿ ವತಿಯಿಂದ ಜ.20 ರಂದು ಬೆಂಗಳೂರಿನಲ್ಲಿ ರೈತರ ಅಧಿಕಾರ ದಿನ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಅಧಿಕಾರ ದಿನದ ಅಂಗವಾಗಿ ಅಂದು ಬೆಳಿಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್‌ನಿಂದ ಬೃಹತ್ ಪಾದಯಾತ್ರೆ ಮೂಲಕ ತೆರಳಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.

ನ್ಯಾಯಾಂಗ ತನಿಖೆಗೆ ಆಗ್ರಹ: ಯಡಿಯೂರಪ್ಪನವರಿಗೆ ಸಂಬಂಧಿಸಿದ ಸಿ.ಡಿ. ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ ಹಾಗೂ ಹಣ ನೀಡಿ ಕೆಲವರು ಸಚಿವರಾಗಿದ್ದಾರೆ ಎಂದು ಬಿಜೆಪಿ ಶಾಸಕರು ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ADVERTISEMENT

ಇಂತಹ ಆರೋಪಗಳನ್ನು ಕೇಳುವ ಬದಲು ಮುಖ್ಯಮಂತ್ರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಬರಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.